Advertisement

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ

12:10 AM Oct 07, 2024 | Team Udayavani |

ಸುಳ್ಯ: ಪ್ರಕರಣವೊಂದರ ವಾರಂಟ್‌ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸರು ಫೋಟೊ ಸಹಿತ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Advertisement

ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲವು ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯೋರ್ವ ತಮಿಳುನಾಡಿನ ಕೋಳಿ ಕರಣ್‌ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಶನಿವಾರ ಪೊಲೀಸರು ಬಂಧಿಸಿ ಸುಳ್ಯದ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಸುಳ್ಯದ ಸರಕಾರಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆದೊಯ್ದಿದ್ದು, ಈ ವೇಳೆ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ.

ತಡರಾತ್ರಿವರೆಗೂ ಹುಡುಕಾಟ ನಡೆಸಲಾಗಿದ್ದರೂ ಪರಾರಿಯಾದ ಆರೋಪಿಯ ಸುಳಿವು ಸಿಕ್ಕಿರಲಿಲ್ಲ. ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಹಾಗೂ ಆರೋಪಿ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ರವಿವಾರವೂ ಪರಾರಿಯಾದ ಆರೋಪಿಯ ಸುಳಿವು ಲಭ್ಯವಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next