Advertisement

ಸುಳ್ಯದ ವೃದ್ಧೆ ಸಾವು: ದ.ಕನ್ನಡ ಜಿಲ್ಲೆಯಲ್ಲಿ ಬಲಿಯಾದ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆ

06:11 PM Jul 04, 2020 | keerthan |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮುಂದುವರಿದಿದೆ. ಶುಕ್ರವಾರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಹಸ್ರ ಮೀರಿದ್ದರೆ, ಇಂದು ಸೋಂಕಿಗೆ ಮತ್ತೊಂದು ಬಲಿಯಾಗಿದೆ.

Advertisement

ಸುಳ್ಯದ ಕೆರೆಮೂಲೆ ನಿವಾಸಿ ವೃದ್ಧೆಯೋರ್ವರು ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅವರಿಗೆ ಕೋವಿಡ್ -19 ಸೋಂಕು ಇರವುದು ದೃಢವಾಗಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿಯಾಗಿದೆ.

ಅನಾರೋಗ್ಯದ ಕಾರಣದಿಂದ ವೃದ್ಧೆಯನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸುಳ್ಯ ಆಸ್ಪತ್ರೆಯ ಸಿಬ್ಬಂದಿಗೆ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ವೃದ್ಧೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಆದರೆ ಪರೀಕ್ಷಾ ವರದಿ ಬರುವ ಮುನ್ನವೇ ಶುಕ್ರವಾರ ಹೃದಯಾಘಾತದಿಂದ ವೃದ್ಧೆ ಸಾವನ್ನಪ್ಪಿದ್ದಾರೆ. ಇಂದು ವರದಿ ಕೈಸೇರಿದ್ದು, ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next