Advertisement

ಸುಮಲತಾ ಗೆಲುವು ಖಚಿತ: ಬಿಎಸ್‌ವೈ ಪುನರುಚ್ಛಾರ

11:14 PM Apr 13, 2019 | Team Udayavani |

ಕೊಪ್ಪಳ: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಅವರ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, 2014ರ ಚುನಾವಣೆಗೆ ಹೋಲಿಕೆ ಮಾಡಿದರೆ ಈ ಬಾರಿ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅವರ ಗೆಲುವು ಖಚಿತ.

Advertisement

ಆದರೆ, ಅವರ ಬಗ್ಗೆ ಸಿಎಂ ಕುಮಾರಸ್ವಾಮಿ ಹಾಗೂ ಶಿವರಾಮೇಗೌಡ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಈ ವರ್ತನೆ ಸರಿಯಲ್ಲ. ಸುಮಲತಾ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ತಮ್ಮ ಪರ ಅಲೆಯಿಲ್ಲ ಎನ್ನುವುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಕೇಂದ್ರದ ಸಾಧನೆ, ರಾಜ್ಯ ಸರ್ಕಾರದ ವೈಫಲ್ಯಗಳೇ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಲಿವೆ ಎಂದರು.

ಅಲ್ಲದೆ, ಶಿವರಾಮೆಗೌಡ ಅವರು ಸುಮಲತಾ ಬಗ್ಗೆ ಮಾಯಾಂಗನೆ ಎಂದಿದ್ದಾರೆ. ಅವರು ಹಗುರವಾಗಿ ಮಾತನಾಡೋಕೆ ತುಂಬಾ ಪ್ರಸಿದ್ಧರು. ಸೋಲಿನ ಭೀತಿಯಿಂದಲೇ ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಚಿವರಾದ ಡಿ.ಕೆ.ಶಿವಕುಮಾರ್‌ ಹಾಗೂ ಎಂ.ಬಿ.ಪಾಟೀಲ್‌ ಅವರು ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ನೀಡುತ್ತಿರುವ ಪರ, ವಿರೋಧ ಹೇಳಿಕೆ ವಿಚಾರ ಅವರಿಗೆ ಬಿಟ್ಟಿದ್ದು. ತಂತ್ರ-ಕುತಂತ್ರದಿಂದ ಅವರು ಮಾತಾಡುತ್ತಿದ್ದಾರೋ ಏನೋ ಗೊತ್ತಿಲ್ಲ. ಆದರೆ, ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಬಹಿರಂಗವಾಗಿದೆ ಎಂದರು.ಸುಮಲತಾ, ಗೆಲುವು ಖಚಿತ, ಬಿಎಸ್‌ವೈ, ಪುನರುಚ್ಛಾರ, Sumalata, win sure, BSY, repeat

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next