ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರ ನಡುವಿನ ಮಾತಿನ ಸಂಘರ್ಷ ಶನಿವಾರ ಪ್ರತಿಭಟನೆ ಸ್ವರೂಪ ಪಡೆದಿತ್ತು. ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತಾ, ಪಕ್ಷದ ಕಾರ್ಯಕರ್ತರು ಯಾವುದೇ ರೀತಿಯ ಹೇಳಿಕೆ ನೀಡದಂತೆ ಮನವಿ ಮಾಡಿದ್ದರು.
ಆದರೆ ಸುಮಲತಾ ಮಾತ್ರ ‘ಒಂದು ಕಡೆ ಕದನ ವಿರಾಮ ಎಂಬಂತೆ ಹೇಳಿಕೆ ಕೊಟ್ಟು ಮತ್ತೂಂದು ಕಡೆ ಕೀ ಕೊಟ್ಟು ಮಾತನಾಡಿಸಲಾಗುತ್ತಿದೆ. ರಾಕ್ಲೈನ್ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದು, ಮಂಡ್ಯ ನಾಯಕರ ಹೇಳಿಕೆಗಳೇನು ಎಂದು ಕಿಡಿಕಾರಿದ್ದರು.
ಇದನ್ನೂ ಓದಿ:ಮೇಕೆ ಕದ್ದನೆಂದು ದಲಿತ ಯುವಕನ ಮೇಲೆ ಹಲ್ಲೆ: ವಿಡಿಯೋ ವೈರಲ್ ಆದ ಬೆನ್ನಲ್ಲೇ 15 ಮಂದಿಯ ಬಂಧನ
ಸಂಸದೆ ಸುಮಲತಾ ಇಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ. ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ. ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ ಎಂದಿದ್ದಾರೆ.
“”ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹು ದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ” ಎಂದು ಕುಮಾರಸ್ವಾಮಿ ಶನಿವಾರ ಅಭಿಮಾನಿಗಳಿಗೆ ಕರೆ ನೀಡಿದ್ದರು.