Advertisement
ವಿಶೇಷ ಅರ್ಥ ಕಲ್ಪಿಸಬೇಕಿಲ್ಲ: ನನ್ನ ಹಾಗೂ ಮಾಜಿ ಸಚಿವರಾದ ಚಲುವರಾಯಸ್ವಾಮಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಇಬ್ಬರೂ ಲೋಕಾಭಿರಾಮವಾಗಿ ಕೆಲಕಾಲ ಚರ್ಚೆ ನಡೆಸಿದೆವು. ರಾಜಕೀಯವಾಗಿ ಏನನ್ನೂ ಮಾತನಾಡಿಲ್ಲ. ಚುನಾವಣೆ ಮುಗಿದಿರುವುದರಿಂದ ಸ್ವಲ್ಪ ರೆಸ್ಟ್ ಮಾಡಿ ಎಂದು ಸಲಹೆ ನೀಡಿದ್ದಾರೆಂದು ತಿಳಿಸಿದರು. ರೈತರ ಸಾಲ ಮನ್ನಾ ಮಾಡುವುದು ಬೇಡ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಡಿ ಎಂದಿರುವ ನಟ ದರ್ಶನ್ ಮಾತಿಗೆ ಬೆಂಬಲ ಸೂಚಿಸಿದ ಸುಮಲತಾ, ದರ್ಶನ್ ಬಹಳ ಒಳ್ಳೆಯ ಹೇಳಿಕೆ ನೀಡಿದ್ದಾರೆ. ನನ್ನ ಮನಸ್ಸಿನಲ್ಲಿರುವುದೂ ಅದೇ ವಿಚಾರ. ಅವರ ಹೇಳಿಕೆಯನ್ನು ಪ್ರಶಂಸಿಸಬೇಕು. ಯಾವುದೇ ಸರ್ಕಾರವಿರಲಿ ಅದನ್ನು ಫಾಲೋ ಮಾಡುವುದು ಒಳ್ಳೆಯದು ಎಂದರು. ಇದು ನನಗೆ ವಿಶ್ರಾಂತಿ ಸಮಯ. ರಾಜಕೀಯ ಬಿಟ್ಟು ಬೇರೆ ವಿಚಾರ ಮಾತನಾಡೋಣ. ನಾನು ಎಲ್ಲರಿಗೂ ಇದೇ ಮಾತನ್ನು ಹೇಳಿದ್ದೇನೆ ಎಂದು ನುಡಿದರು.
ಮಂಡ್ಯ: ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಹಿಂತಿರುಗುವ ವೇಳೆ ಕ್ಯಾಂಟರ್ವೊಂದು ಬೈಕ್ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಅಭಿಮಾನಿಯೊಬ್ಬನ ನಿವಾಸಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ತೆರಳಿ ಆತನ ಆರೋಗ್ಯ ವಿಚಾರಿಸಿದರು. ಭಾನುವಾರ ಮಂಡ್ಯ ತಾಲೂಕಿನ ಊರಮಾರಕಸಲಗೆರೆ ಗ್ರಾಮದ ಕಿರಣ್ ಅವರ ನಿವಾಸಕ್ಕೆ ತೆರಳಿದ ಸುಮಲತಾ ಅಂಬರೀಶ್, ಆತನ ಯೋಗಕ್ಷೇಮ ವಿಚಾರಿಸಿ ಕುಟುಂಬದವರಿಗೆ ಧೈರ್ಯ ಹೇಳಿದರು. ಮಾ.20ರಂದು ನಡೆದ ಸುಮಲತಾ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕಿರಣ್ ಸ್ನೇಹಿತರೊಬ್ಬರ ಬೈಕ್ನಲ್ಲಿ ಊರಿಗೆ ಹಿಂತಿರುಗುವಾಗ ಕ್ಯಾಂಟರ್ ಡಿಕ್ಕಿ ಹೊಡೆದು ಕಿರಣ್ ಗಾಯಗೊಂಡಿದ್ದನು.
Related Articles
Advertisement
ಸ್ವಾಗತ: ಊರಮಾರಕಸಲಗೆರೆ ಗ್ರಾಮಕ್ಕೆ ಆಗಮಿಸಿದ ಸುಮಲತಾ ಅಂಬರೀಶ್ ಅವರನ್ನು ಮಹಿಳೆಯರು ಹೂ ಮಾಲೆ ಹಾಕಿ ಅಭಿನಂದಿಸಿದರು. ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಮುಗಿಬಿದ್ದರು.