Advertisement

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

09:00 PM Apr 25, 2024 | Team Udayavani |

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಸದೆ ಸುಮಲತಾ ಅಂಬರೀಷ್‌ ಅಸಹಕಾರ ನೀಡಿದ್ದಾರೆಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಆರೋಪ ಮಾಡಿದ ಬೆನ್ನಲ್ಲೇ ಸುಮಲತಾ ಎಕ್ಸ್‌ನಲ್ಲಿ ವಿವೇಕದ ಪಾಠ ಹೇಳಿದ್ದಾರೆ.

Advertisement

ತಮ್ಮ ಎಕ್ಸ್‌ ಖಾತೆಯಲ್ಲಿ “ಏನು ಹೇಳಬೇಕೆನ್ನುವುದು ಜ್ಞಾನ, ಹೇಗೆ ಹೇಳಬೇಕೆನ್ನುವುದು ವ್ಯಕ್ತಿತ್ವ, ಎಷ್ಟು ಹೇಳಬೇಕೆನ್ನುವುದು ಕೌಶಲ್ಯ, ಹೇಳಬೇಕೋ ಬೇಡವೋ ಎನ್ನುವುದು ವಿವೇಕ’ ಎಂದು ಟ್ವೀಟ್‌ ಮಾಡಿದ್ದಾರೆ. ಹಾಸನ ಹಾಗೂ ಮಂಡ್ಯ  ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಕೆಲವು ಬಿಜೆಪಿ ನಾಯಕರು ಸಹಕಾರ ನೀಡಲಿಲ್ಲ ಎಂದು ಎಚ್‌.ಡಿ.ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದ ಬೆನ್ನಲ್ಲೆ, ಸುಮಲತಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ.


 

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next