Advertisement

ಧರ್ಮಸ್ಥಳಕ್ಕೆ ಸುಮಲತಾ ಅಂಬರೀಷ್‌ ಭೇಟಿ

02:54 AM Apr 02, 2019 | sudhir |

ಬೆಳ್ತಂಗಡಿ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಷ್‌ ಸೋಮವಾರ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

Advertisement

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಮೇಲಿನ ವಿರೋಧಿಗಳ ಅಪಪ್ರಚಾರಕ್ಕೆ ಜನರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ. ಇದರ ಬಗ್ಗೆ ನಾನೇನು ಪ್ರತಿಕ್ರಿಯಿಸಲಾರೆ’ ಎಂದರು.

ಶ್ರೀರಂಗ ಪಟ್ಟಣದಲ್ಲಿ ಈಗಾಗಲೇ ದರ್ಶನ್‌ ಮತ ಪ್ರಚಾರ ಕೈಗೊಂಡಿದ್ದಾರೆ. ಮಂಗಳವಾರ ನಟ ಯಶ್‌ ಪ್ರಚಾರದಲ್ಲಿ ಕೂಡಿಕೊಳ್ಳಲಿದ್ದಾರೆ. ನಾನು ಸೇರಿ ಬೆಂಬಲಿಗರು ಮಂಗಳವಾರದಿಂದ ಪ್ರಚಾರ ಕಾರ್ಯ ನಡೆಸಲಿದ್ದೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next