Advertisement

ಸಂಸದೆ ಸುಮಲತಾ ಅಂಬರೀಶ್‌ ಕುಕ್ಕೆಗೆ ಭೇಟಿ

10:05 AM Dec 16, 2019 | sudhir |

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ರವಿವಾರ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಹಾಗೂ ಪುತ್ರ ಅಭಿಷೇಕ್‌ ಗೌಡ ಅವರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದರು.
ಬೆಳಗ್ಗೆ ದೇಗುಲಕ್ಕೆ ಆಗಮಿಸಿದ ಅವರು ಶ್ರೀ ದೇವರ ದರ್ಶನ ಪಡೆದರು. ಅರ್ಚಕರು ಶಾಲು ಹಾಕಿ ಪ್ರಸಾದ ನೀಡಿದರು. ಬಳಿಕ ಅವರು ಆಶ್ಲೇಷಾ ಬಲಿ, ನಾಗಪ್ರತಿಷ್ಠೆ, ಪವಮಾನ ಅಭಿಷೇಕ, ಶೇಷ ಸೇವೆ ನೆರವೇರಿಸಿದರು. ಹೊಸೊಳಿಗಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು. ಬಳಿಕ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ತೆರಳಿ ಅಲ್ಲಿ ಆಶ್ಲೇಷಾ ಸೇವೆ ನೆರವೇರಿಸಿಕೊಂಡರು. ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶ ಉಪಸ್ಥಿತರಿದ್ದರು.
ನಟಿ ಅಮೂಲ್ಯಾರಿಂದ ಸರ್ಪಸಂಸ್ಕಾರ ಸೇವೆ
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಎರಡು ದಿನಗಳ ಹಿಂದೆ ಆಗಮಿಸಿದ್ದ ಚಿತ್ರನಟಿ ಅಮೂಲ್ಯಾ ದಂಪತಿ ಶ್ರೀ ಮಠದಲ್ಲಿ ಸರ್ಪಸಂಸ್ಕಾರ ಸೇವೆ ನಡೆಸಿ, ರವಿವಾರ ಪೂಜೆ ಮುಗಿಸಿ ಮರಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next