Advertisement

ಕಾಂಗ್ರೆಸ್‌ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ ಸುಮಲತಾ

09:16 PM May 06, 2023 | Team Udayavani |

ಮಂಡ್ಯ: ನಾಗಮಂಗಲದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಸಂಸದೆ ಸುಮಲತಾ ಅಂಬರೀಶ್‌ ಕಾಂಗ್ರೆಸ್‌ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ್ದಾರೆ.
ಬಿಜೆಪಿಗೆ ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿ, ನನ್ನ ನಡೆಯಿಂದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಬೇಸರ ತರಿಸಿದ್ರೆ, ನೋವುಂಟು ಮಾಡಿದ್ರೆ ಕ್ಷಮೆಯಾಚಿಸುತ್ತೇನೆ. ಆದರೆ, ನಿಮ್ಮ ನಾಯಕರ ನಡೆಗೆ ನಾನು ಹೊಣೆ ಅಲ್ಲ ಎಂದು ಭಾವುಕವಾಗಿ ಮಾತನಾಡಿದ್ದಾರೆ.

Advertisement

ನಿಮ್ಮ ರಾಜ್ಯಾಧ್ಯಕ್ಷರು ನನ್ನ ಬಗ್ಗೆ ಕೊಟ್ಟಿರುವ ಹೇಳಿಕೆಗಳನ್ನು ಗಮನಿಸಿ. ಆ ನಂತರ ನನ್ನ ನಿರ್ಧಾರ ಬಗ್ಗೆ ಪ್ರಶ್ನೆ ಮಾಡಿ ಎಂದ ಅವರು, ಬಿಜೆಪಿ ಪಕ್ಷದವರು ಅತ್ಯಂತ ಗೌರವದಿಂದ ಆಹ್ವಾನಿಸಿದರು ಎಂದು ತಿಳಿಸಿದ್ದಾರೆ.

ರಸ್ತೆಗೆ ಅಂಬರೀಶ್‌ ಹೆಸರಿಟ್ಟಿದ್ದು ಬಿಜೆಪಿ: ನೀವು ಪಕ್ಷಕ್ಕೆ ಬಂದ್ರೆ ನಮಗೆ ಶಕ್ತಿ ಸಿಗಲಿದೆ ಎಂಬ ಮಾತು ಹೇಳಿದ್ರು. ಬಿಜೆಪಿ ಸರ್ಕಾರ ಬೆಂಗಳೂರು-ಮೈಸೂರಲ್ಲಿ ರಸ್ತೆಗೆ ಅಂಬರೀಶ್‌ ಹೆಸರಿಟ್ಟಿದ್ದಾರೆ. 12 ಕೋಟಿ ವೆಚ್ಚದಲ್ಲಿ ಸುಂದರ ಸ್ಮಾರಕ ನಿರ್ಮಿಸಿದ್ದಾರೆ. ಅಂಬರೀಶ್‌ ಅವರು ಬಿಜೆಪಿಯಲ್ಲಿದ್ರಾ? 27 ವರ್ಷ ಕಾಂಗ್ರೆಸ್‌ ಸೇವೆ ಸಲ್ಲಿಸಿದ್ದಾರೆ. ಈ ನಡುವೆ ಜೆಡಿಎಸ್‌ನ ಹಲವರು ಅಂಬರೀಶ್‌ ಆತ್ಮೀಯರು ಎಂದು ಹೇಳಿಕೊಂಡು ಓಡಾಡ್ತಿದ್ದಾರೆ. ಆತ್ಮೀಯತೆ ಇದ್ದಮೇಲೆ ಅಧಿಕಾರದಲ್ಲಿದ್ದಾಗ ಇವರೇಕೆ ಸ್ಮಾರಕ ಮಾಡುವ ಕೆಲಸ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next