Advertisement

ಸುಮಲತಾ ಕಾಂಗ್ರೆಸ್‌ ಸೇರ್ಪಡೆ ಚರ್ಚೆ ಆಗಿಲ್ಲ: ಚಲುವರಾಯಸ್ವಾಮಿ

12:19 AM Oct 16, 2023 | Team Udayavani |

ಸಕಲೇಶಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರು ಕಾಂಗ್ರೆಸ್‌ ಸೇರ್ಪಡೆ ವಿಚಾರ ಚರ್ಚೆ ಆಗಿಲ್ಲ. ಈಗ ಯಾವುದೇ ಮೈತ್ರಿ ಇಲ್ಲ. ಹಾಗಾಗಿ ಮಂಡ್ಯ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಇರುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

Advertisement

ಧರ್ಮಸ್ಥಳ , ಉಡುಪಿ ಪ್ರವಾಸದಿಂದ ಮರಳುವ ವೇಳೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ಕಾಂಗ್ರೆಸ್‌ ಮುಖಂಡರನ್ನು ಭೇಟಿ ಮಾಡಿ ಮಾತನಾಡಿದರು.
ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಹಾಲಿ ಸಂಸದರ ಸ್ಪರ್ಧೆ ವಿಚಾರದ ಕುರಿತು ಮಾತನಾಡಿದ ಸಚಿವರು, ಅಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಇರುತ್ತಾರೆ. ಕಳೆದ ಚುನಾವಣೆಯೇ ಬೇರೆ ಈ ಚುನಾವಣೆಯೇ ಬೇರೆ. ಸುಮಲತಾ ಬಿಜೆಪಿಯಿಂದ ಸ್ಪರ್ಧಿಸುತ್ತಾರೋ, ಜೆಡಿಎಸ್‌ ನಿಂದ ಕಣಕ್ಕಿಳಿಯುತ್ತಾರೊ ಗೊತ್ತಿಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next