Advertisement

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

10:48 PM Mar 28, 2024 | Team Udayavani |

ಮಂಡ್ಯ: ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾಗೆ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಮಾ.30ರಂದು ಬೆಂಬಲಿಗರು ಹಾಗೂ ಆಪ್ತರ ಸಭೆ ಕರೆದಿದ್ದಾರೆ. ಮಂಡ್ಯ ಮೈತ್ರಿ ಟಿಕೆಟ್‌ ಜೆಡಿಎಸ್‌ ಪಾಲಾಗಿದ್ದರಿಂದ ಕಳೆದ ಒಂದು ವಾರದಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಮೌನವಾಗಿದ್ದ ಸಂಸದೆ ಸುಮಲತಾ ಮಾ.30ರಂದು ಮಧ್ಯಾಹ್ನ 2.30ಕ್ಕೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

Advertisement

ಬಿಜೆಪಿ ಟಿಕೆಟ್‌ ಕೈ ತಪ್ಪಿದ ಬಗ್ಗೆಯೂ ಅವಲೋಕನ ನಡೆಸುವ ಸುಮಲತಾ, ಮುಂದಿನ ರಾಜಕೀಯ ನಡೆ ಬಗ್ಗೆ   ಸಭೆಯ ಬಳಿಕ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಸುಮಲತಾ ಆಪ್ತ ಶಶಿಕುಮಾರ್‌ ಹನಕೆರೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next