Advertisement

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

09:30 PM Apr 17, 2024 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಗುರುವಾರದಿಂದ ಕಪ್ಪು ಕೋಟ್‌ ಧರಿಸುವುದಕ್ಕೆ ವಕೀಲರಿಗೆ ವಿನಾಯಿತಿ ಇರಲಿದೆ.

Advertisement

ಬೇಸಗೆ ಹಿನ್ನೆಲೆಯಲ್ಲಿ ವಕೀಲರ ಬೇಡಿಕೆಗೆ ಸ್ಪಂದಿಸಿರುವ ಹೈಕೋರ್ಟ್‌ ಎಪ್ರಿಲ್‌ 18ರಿಂದ ಮೇ 31Ã ‌ವರೆಗೆ ರಾಜ್ಯದ ಜಿಲ್ಲಾ ಮತ್ತು ವಿಚಾರಣಾಧೀನ ನ್ಯಾಯಾಲಯಗಳಲ್ಲಿ ವಕೀಲರು ಕಪ್ಪು ಕೋಟ್‌ ಧರಿಸದೇ ಕಲಾಪದಲ್ಲಿ ಭಾಗಿಯಾಗಲು ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಿದೆ.

ದೈನಂದಿನ ಸೂಚಿತ ಡ್ರೆಸ್‌ ಬದಲಾಗಿ ವಕೀಲರು ಶ್ವೇತವರ್ಣದ ಶರ್ಟ್‌ ಅಥವಾ ಯಾವುದೇ ಬಣ್ಣದ ಗಂಭೀರತೆ ಬಿಂಬಿಸುವ ಶ್ವೇತವರ್ಣದ ಸಲ್ವಾರ್‌ ಕಮೀಜ್‌ ಇಲ್ಲವೇ ಸೀರೆ ಜತೆಗೆ ಸಾದಾ ಶ್ವೇತ ವರ್ಣದ ಕುತ್ತಿಗೆ ಬ್ಯಾಂಡ್‌ ಧರಿಸಿ ಕಲಾಪದಲ್ಲಿ ಭಾಗಿಯಾಗಬಹುದು ಎಂದು ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಕೆ.ಎಸ್‌. ಭರತ್‌ ಕುಮಾರ್‌ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next