Advertisement

ನಳಿನ್‌ ಕುಮಾರ್‌ ಕಟೀಲ್‌ಗೆ ಸಮನ್ಸ್‌ ಜಾರಿ

11:35 PM Jan 24, 2020 | Team Udayavani |

ಬೆಂಗಳೂರು: ಶಾಸಕ ರಿಜ್ವಾನ್‌ ಅರ್ಷದ್‌ ವಿರುದ್ಧ ನಕಲಿ ಮತದಾರರ ಚೀಟಿ ಮುದ್ರಿಸಿದ ಸುಳ್ಳು ಆರೋಪ ಮಾಡಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ. 2018ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಕಲಿ ಮತದಾರರ ಚೀಟಿ ದಂಧೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದ ರಿಜ್ವಾನ್‌ ಅರ್ಷದ್‌ ಭಾಗಿಯಾಗಿದ್ದಾರೆಂಬ ಆರೋಪದ ಟ್ವೀಟ್‌ನನ್ನು ಬಿಜೆಪಿ ಕರ್ನಾಟಕ ಖಾತೆಯಿಂದ ಟ್ವೀಟ್‌ ಮಾಡಲಾಗಿತ್ತು.

Advertisement

ಈ ಟ್ವೀಟ್‌ನನ್ನು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ರಿಟ್ವೀಟ್‌ ಮಾಡಿದ್ದರು. ಸುಳ್ಳು ಆರೋಪದ ಟ್ವೀಟ್‌ ಮಾಡಿ ಮಾನಹಾನಿ ಉಂಟು ಮಾಡಲಾಗಿದೆ ಎಂದು ಆರೋಪಿಸಿ ರಿಜ್ವಾನ್‌ ಅರ್ಷದ್‌, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತಿತರರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ ಶುಕ್ರವಾರ ಆರೋಪಿತರಿಗೆ ಸಮನ್ಸ್‌ ಜಾರಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next