Advertisement

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:46 AM Dec 12, 2021 | Team Udayavani |

ಮೇಷ: ದೀರ್ಘ‌ ಪ್ರಯಾಣ. ನಷ್ಟ ದ್ರವ್ಯವನ್ನು ಪಡೆಯಲು ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೂರದ ವ್ಯವಹಾರಗಳಿಂದ ಧನಾಗಮನ. ಅಧ್ಯಯನ ಪ್ರವೃತ್ತರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

Advertisement

ವೃಷಭ: ಅನಿರೀಕ್ಷಿತ ಸ್ಥಾನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ನಡೆ. ಧನ ಸಂಪತ್ತಿನ ಅಭಿವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮಾನಸಿಕ ತೃಪ್ತಿ.

ಮಿಥುನ: ಮಕ್ಕಳಿಂದ ಸಂತೋಷ ವೃದ್ಧಿ. ಅಧ್ಯಯನ ಪ್ರವೃತ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಮಾರ್ಗದರ್ಶನ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಧನಾಗಮನಕ್ಕೆ ಸರಿಯಾಗಿ ಧನ ವ್ಯಯ ಸಂಭವ.

ಕರ್ಕ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ದಂಪತಿಗಳಿಗೆ ಪರಸ್ಪರ ಪ್ರೋತ್ಸಾಹ ಅಗತ್ಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಸ್ಪಷ್ಟನೆ ಇರಲಿ. ಆಸ್ತಿ ಕ್ರಯವಿಕ್ರಯ ವಿಚಾರದಲ್ಲಿ ಮುನ್ನಡೆ.

ಸಿಂಹ: ಆರೋಗ್ಯ ಗಮನಿಸಿ. ಹಠಮಾರಿತನದಿಂದ ನಷ್ಟ ಸಂಭವ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ಮಧ್ಯಮ.

Advertisement

ಕನ್ಯಾ: ಉತ್ತಮ ವಾಕ್‌ಚತುರತೆಯಿಂದ ಪ್ರದರ್ಶನ. ಉದ್ಯೋಗ ವ್ಯವಹಾರಗಲ್ಲಿ ಪ್ರಗತಿ. ಗೌರವ ಸುಖಾದಿ ಲಭ್ಯ. ಉತ್ತಮ ಧನಾರ್ಜನೆ. ಅಧ್ಯಯನ ಪ್ರವೃತ್ತರಿಗೆ ಸರ್ವ ಸೌಲಭ್ಯ ಪ್ರಾಪ್ತಿ. ದಂಪತಿಗಳಿಗೆ ಪರಸ್ಪರರಿಂದ ಲಾಭ.

ತುಲಾ: ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ. ದಾಂಪತ್ಯ ಸುಖ ವೃದ್ಧಿ. ರಾಜಕೀಯ ಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಸುಖ. ಮೇಲಧಿಕಾರಿಗಳಿಂದ ಸಹಾಯ. ಉತ್ತಮ ಧನ ಸಂಪತ್ತು. ಸಾಂಸಾರಿಕ ಸುಖ, ವಿದ್ಯಾರ್ಥಿಗಳಿಗೆ ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಆಹಾರೋದ್ಯಮ ಹೈನುಗಾರಿಕೆ ವಸ್ತ್ರೋದ್ಯಮ, ಆಭರಣ ವ್ಯವಹಾರಸ್ಥರಿಗೆ ಲಾಭ.

ಧನು: ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಸಿಗದು. ಸ್ವಂತ ಪ್ರಯತ್ನದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿಕೊಳ್ಳಿ. ಮೇಲಧಿಕಾರಿಗಳಲ್ಲಿ ಸಂಯಮದಿಂದ ವ್ಯವಹರಿಸಿ. ಪಾಲುದಾರಿಕಾ ಕ್ಷೇತ್ರದವರು ತಾಳ್ಮೆ ಕಳೆದುಕೊಳ್ಳಬಾರದು. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.

ಮಕರ: ಮಾತೃ ಸಮಾನರ ಕಾರ್ಯ ನಿರ್ವಹಿಸಿದ ಸಮಾದಾನ. ಆರೋಗ್ಯ ಸ್ಥಿರ ಧನಾರ್ಜನೆಗೆ ಸಮನಾದ ವ್ಯಯ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ. ನೂತನ ಮಿತ್ರರ ಸಮಾಗಮ.

ಕುಂಭ: ಬಂದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಆತುರತೆ ಸಲ್ಲದು. ಪ್ರಯಾಣದಿಂದ ಸುಖ ಸಮೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯದಲ್ಲಿ ಗಮನವಿರಲಿ. ವ್ಯಾಪಾರಸ್ಥರಿಗೆ ಉತ್ತಮ ದಿನ.

ಮೀನ: ಮಕ್ಕಳ ಆರೋಗ್ಯದ ಕಡೆ ಗಮನಿಸಿ. ಪ್ರಯಾಣದಿಂದ ಲಾಭ. ದೂರಕಾರ್ಯದಲ್ಲಿ ಜಯ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ಧನಾರ್ಜನೆ ಉತ್ತಮವಿದ್ದರೂ ವಿಳಂಬವಾಗಿ ದೊರಕುವುದು.

Advertisement

Udayavani is now on Telegram. Click here to join our channel and stay updated with the latest news.

Next