Advertisement

ರವಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

07:21 AM Sep 18, 2022 | Team Udayavani |

ಮೇಷ: ದೈಹಿಕ ಹಾಗೂ ಮಾನಸಿಕ ಸುಖಕ್ಕೆ ಹೆಚ್ಚಿದ ಪರಿಶ್ರಮ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ. ವಾಕ್‌ಚತುರತೆಯಿಂದ ಜನಮನ್ನಣೆ. ದಾಂಪತ್ಯ ಸುಖದಲ್ಲಿ ಪರಸ್ಪರ ಸಹಕಾರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

Advertisement

ವೃಷಭ: ಆರೋಗ್ಯ ವೃದ್ಧಿœ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಸ್ಥಾನಮಾನ ಗೌರವ. ಅಧಿಕ ಧನಾರ್ಜನೆ. ಗೃಹದಲ್ಲಿ ಸಣ್ಣ ಬದಲಾವಣೆಗಳು ತೋರಿಬಂದಾವು. ಸಹೋದರಾದಿ ವರ್ಗದವರಿಂದ ನೆಮ್ಮದಿ ಸಂತೋಷ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ಮಿಥುನ: ಸುದೃಢ ಆರೋಗ್ಯ. ಮಾನಸಿಕ ನೆಮ್ಮದಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಧಿಕಾರ ಗೌರವಾದಿ ಪ್ರಾಪ್ತಿ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ಗೃಹದಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಅನುಭವದ ಲಾಭ.

ಕರ್ಕ: ಹಲವು ಚಟುವಟಿಕೆಗಳಿಂದ ಕೂಡಿದ ದಿನ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾದ ಆಲೋಚನೆ ನಿರ್ಣಯದಿಂದ ನಿರàಕ್ಷಿತ ಸ್ಥಾನ ಲಾಭ. ಆಸ್ತಿ ವಿಚಾರದಲ್ಲಿ ಎಚ್ಚರಿಕೆ.

ಸಿಂಹ: ದೈಹಿಕ ಆರೋಗ್ಯ ವೃದ್ಧಿ ಹಾಗೂ ಮಾನಸಿಕ ಸಂತುಷ್ಟತೆ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಬಂಧುಗಳಿಂದ ಸಹಕಾರ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ, ಮಾತಿನಲ್ಲಿ ತಾಳ್ಮೆ ಎಚ್ಚರಿಕೆಯಿಂದ ಯಶಸ್ಸು. ದಾಂಪತ್ಯ ಸುಖ ವೃದ್ಧಿ.

Advertisement

ಕನ್ಯಾ: ಆರೋಗ್ಯವು ಸುದಾರಣೆಯ ಹಾದಿಯಲ್ಲಿ. ಸರಿಯಾದ ಶಿಸ್ತು ಪಾಲನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ಮಾನಸಿಕ ನೆಮ್ಮದಿ ವೃದ್ಧಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ನಿರ್ವಹಿಸುವ ಚಟುವಟಿಕೆಗಳಲ್ಲಿ ಪ್ರಗತಿ. ಮಿತ್ರರಿಂದ ಹೆಚ್ಚಿದ ಸಹಕಾರ.

ತುಲಾ: ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿಯಲ್ಲಿ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿಪಾತ್ರರಾಗು ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಬ. ವಿದ್ಯಾರ್ಥಿಗಳಿಗೆ ಹೆಚ್ಚಿನ ಗೌರವ.

ವೃಶ್ಚಿಕ: ದೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೈರ್ಯದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಮಾರ್ಗದರ್ಶನ.

ಧನು: ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸnುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತರಿಗೆ ಉತ್ತಮ ವಾತಾವರಣ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಮಕರ: ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.

ಕುಂಭ: ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ.

ಮೀನ: ಮಾನಸಿಕ ಸಂತುಷ್ಠತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ವೃದ್ಧಿ.

Advertisement

Udayavani is now on Telegram. Click here to join our channel and stay updated with the latest news.

Next