Advertisement

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:46 AM Sep 19, 2021 | Team Udayavani |

ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭಫ‌ಲ. ದೀರ್ಘ‌ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ನೂತನ ಮಿತ್ರರ ಭೇಟಿ. ಸುಖ ಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.

Advertisement

ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ ಆಹಾರೋದ್ಯಮ, ವಸ್ತ್ರ, ಆಭರಣ ವ್ಯವಹಾರಸ್ಥರಿಗೆ  ಅಭಿವೃದ್ಧಿ. ನಿರೀಕ್ಷಿತ ಧನವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖವೃದ್ಧಿ.

ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾಧಾನ ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ಪಾನೀಯ ಆಹಾರೋದ್ಯಮ ಸಂಸ್ಥೆಗಳಿಗೆ ಅನುಕೂಲ.ಸಾಂಸಾರಿಕ ನೆಮ್ಮದಿಗೆ ತಾಳ್ಮೆ ಅಗತ್ಯ.

ಕರ್ಕ: ಉತ್ತಮ ವಾಕ್‌ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ. ಆರೋಗ್ಯ ಗಮನಿಸಿ.

ಸಿಂಹ: ಕಾರ್ಯನಿಮಿತ್ತದೀರ್ಘ‌ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ ಧಾರ್ಮಿಕ ಕಾರ್ಯಗಳಿಗೆ ದಾನ ಧರ್ಮಾದಿಗಳಿಗೆ ಧನ ವ್ಯಯಿಸಿದ ತೃಪ್ತಿ.ವಿದ್ಯಾರ್ಥಿಗಳಿಗೆ ಶ್ರೇಯಸ್ಸು.

Advertisement

ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ ಸಾಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ.

ತುಲಾ: ಅತೀ ಆಸೆ ಮಾಡದೇ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ಉತ್ತಮ ಜನ ಮನ್ನಣೆ. ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ. ನಿರೀಕ್ಷಿಸಿದಕಾರ್ಯ ಸಾಧಿಸಿದ ಸಮಾಧಾನ. ವಿದ್ಯಾರ್ಥಿಗಳಿಗೆ, ದಂಪತಿಗಳಿಗೆ ಶುಭಫ‌ಲ ದಿನ.

ವೃಶ್ಚಿಕ: ರಾಜಕೀಯನಾಯಕರಿಗೆಉತ್ತನಜನಮನ್ನಣೆ.ಹೆಚ್ಚಿನ ಜವಾಬ್ದಾರಿ ಸಿಗುವ ಅವಕಾಶ. ನೂತನ ಮಿತ್ರರ ಸಮಾಗಮ. ಬಂಧುಗಳಿಂದ ಪ್ರೋತ್ಸಾಹ. ಸಾಂಸಾರಿಕರಿಗೆ, ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿಗಳ ಸುಖ. ಅವಿವಾಹಿತರಿಗೆ ವಿವಾಹ ಭಾಗ್ಯ.

ಧನು: ಪಾಲುದಾರಿಕಾ ವ್ಯವಹಾರಸ್ಥರೂ, ದಂಪತಿಗಳು ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪ್ರಯಾಣ ಅವಕಾಶ. ಸ್ಥಾನಮಾನಕ್ಕೆ ಕೊರತೆ ಕಾಣದು. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯ ಅನುಕೂಲಕರ.

ಮಕರ: ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯವೃದ್ಧಿ. ಮಿತ್ರರಲ್ಲಿ, ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ.ನೀರಿನಿಂದ ಉತ್ಪನ್ನ ವಸ್ತುಗಳಿಂದ, ಆಹಾರೋದ್ಯಮ, ಆಭರಣ, ವಸ್ತ್ರ ವ್ಯಾಪಾರಸ್ಥರಿಗೆ ಲಾಭ.

ಕುಂಭ: ಅನ್ಯರ ಸಹಾಯ ನಿರೀಕ್ಷಿಸದೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಗುರಿಸಾಧಿಸಿರಿ. ಧನಾರ್ಜನೆಗೆ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಯಶಸ್ಸು. ದಾಂಪತ್ಯ ಸುಖ ತೃಪ್ತಿದಾಯಕ. ಗಣಿ, ಭೂವ್ಯವಹಾರ, ಆಹಾರೋದ್ಯಮಕ್ಕೆಯಶಸ್ಸು.

ಮೀನ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ದೇಶವಿದೇಶದ ವಿದ್ಯಾಲಯದಲ್ಲಿ ಅವಕಾಶ. ದೀರ್ಘ‌ ಪ್ರಯಾಣದಿಂದ ಲಾಭ. ರಾಜಕೀಯ ಕಾರ್ಯ ಕ್ಷೇತ್ರದಲ್ಲಿ ರಹಸ್ಯ ವ್ಯವಹಾರದಿಂದ ನಿರೀಕ್ಷಿತ ಸಾಧನೆ. ಅಭಿವೃದ್ಧಿದಾಯಕಧನಾರ್ಜನೆ.

Advertisement

Udayavani is now on Telegram. Click here to join our channel and stay updated with the latest news.

Next