Advertisement

ಲಾಕ್‌ಡೌನ್‌: ರವಿವಾರ ಜಿಲ್ಲೆ ಸಂಪೂರ್ಣ ಸ್ತಬ್ಧ

10:31 AM Jul 27, 2020 | Suhan S |

ಹಾವೇರಿ: ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕರೆ ನೀಡಿರುವ ರವಿವಾರದ ಲಾಕ್‌ ಡೌನ್‌ಗೆ ಜಿಲ್ಲೆಯ ಜನತೆ ಬೆಂಬಲ ನೀಡಿದ್ದು, ರವಿವಾರ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿತ್ತು.

Advertisement

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರವಿವಾರ ಬೆಳಿಗ್ಗೆಯಿಂದಲೇ ಬಹುತೇಕ ಎಲ್ಲ ವ್ಯಾಪಾರ-ವ್ಯವಹಾರ ಬಂದ್‌ ಆಗಿತ್ತು. ರಸ್ತೆಯಲ್ಲಿ ಜನ ಸಂಚಾರ, ಸಾರಿಗೆ ಬಸ್‌, ಖಾಸಗಿ ವಾಹನಗಳ ಸಂಚಾರವೂ ಸಂಪೂರ್ಣ ಬಂದ್‌ ಆಗಿತ್ತು. ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಪೊಲೀಸರು ಕರ್ಫ್ಯೂ ನಿಯಮ ಪಾಲನೆಗಾಗಿ ನಿರತರಾಗಿದ್ದರು. ಹಾಲು, ತರಕಾರಿಯಂತಹ ಅವಶ್ಯಕ ವಸ್ತುಗಳ ಅಂಗಡಿಗಳು ಮಾತ್ರ ಬೆಳಿಗ್ಗೆ 9 ಗಂಟೆ ವರೆಗೆ ತೆರೆದಿದ್ದವು. ನಗರದಲ್ಲಿ ಪೊಲೀಸರು ಬ್ಯಾರಿಕೇಡ್‌ ಹಾಕಿ ರಸ್ತೆ ಬಂದ್‌ ಮಾಡಿ ಅನಗತ್ಯ ಓಡಾಟಕ್ಕೆ ಬ್ರೇಕ್‌ ಹಾಕಿದ್ದರು. ಈ ನಡುವೆ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ದಂಡ ಹಾಕಿ ಬಿಸಿ ಮುಟ್ಟಿಸಿದರು.

ಜಿಲ್ಲೆಯ ಉಳಿದ ಕಡೆಗಳಲ್ಲಿ ಬೆಳಗ್ಗೆ 9 ಗಂಟೆ ವರೆಗೆ ಹಾಲು ಮಾರಾಟ ಕೇಂದ್ರ ಹಾಗೂ ಕೆಲ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಉಳಿದಂತೆ ಹೋಟೆಲ್‌, ಹಣ್ಣು-ತರಕಾರಿ ಮಾರುಕಟ್ಟೆ, ಹೂ ಮಾರಾಟ ಬಂದ್‌ ಆಗಿತ್ತು. ಬಸ್‌ ಸಂಚಾರ ಸಹ ಸ್ಥಗಿತವಾಗಿತ್ತು. ತರಕಾರಿ ಮಾರುಕಟ್ಟೆ, ಜನದಟ್ಟಣೆಯಿಂದ ಕೂಡಿರುತ್ತಿದ್ದ ರಸ್ತೆಗಳು, ನಗರದ ವಿವಿಧ ಪ್ರಮುಖ ವೃತ್ತಗಳು ಜನರಿಲ್ಲದೆ ಭಣಭಣ ಎನಿಸಿದವು. ಬಸ್‌, ಆಟೋ ಸೇರಿದಂತೆ ಯಾವುದೇ ಸಾರಿಗೆ ಸಂಚಾರವಿಲ್ಲದೇ ರಸ್ತೆಗಳು ಬಿಕೋ ಎಂದವು.

Advertisement

Udayavani is now on Telegram. Click here to join our channel and stay updated with the latest news.

Next