Advertisement

ಇದು ರಾಮ v/s ಅಲ್ಲಾಹು ನಡುವಿನ ಚುನಾವಣೆ; MLA ಸುನೀಲ್ ಹೇಳಿದ್ದೇನು?

01:33 PM Jan 23, 2018 | Sharanya Alva |

ಬಂಟ್ವಾಳ:ಇದು ಅಲ್ಲಾಹು ಮತ್ತು ಶ್ರೀರಾಮನ ನಡುವಿನ ಚುನಾವಣೆ. ರಾಮನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸ್ತೀವಾ, ಅಲ್ಲಾನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸ್ತೀವಾ ಎಂಬುದು ತೀರ್ಮಾನವಾಗಬೇಕು…ಇದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ವಿವಾದಾತ್ಮಕ ಹೇಳಿಕೆ.

Advertisement

ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದ ಬಿಜೆಪಿ ಪರಿವರ್ತನಾ ರಾಲಿಯಲ್ಲಿ ಮಾತನಾಡುತ್ತ ಈ ಹೇಳಿಕೆ ನೀಡಿರುವುದಾಗಿ ಖಾಸಗಿ ಮಾಧ್ಯಮಗಳು ವರದಿ ಮಾಡಿವೆ.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ರಾಜೇಶ್ ನಾಯಕ್ ರಾಮನಂತೆ, ಕಾಂಗ್ರೆಸ್ ಅಭ್ಯರ್ಥಿ(ರಮಾನಾಥ್ ರೈ)ಅಲ್ಲಾಹು..ಹೀಗಾಗಿ ಕ್ಷೇತ್ರದ ಜನರು ರಾಮನ ಭಕ್ತ ಬೇಕೋ, ಅಲ್ಲಾನನ್ನು ಪ್ರೀತಿಸುವ ವ್ಯಕ್ತಿ ಬೇಕೋ ಎಂಬುದನ್ನು ನಿರ್ಧರಿಸಬೇಕು ಎಂದು ಹೇಳಿರುವುದಾಗಿ ವರದಿ ವಿವರಿಸಿದೆ.

ಈ ಚುನಾವಣಾ ರಾಮ, ಅಲ್ಲಾ ನಡುವಿನ ಸಮರವಾಗಿದೆ. ಶ್ರೀರಾಮ ಮೌಲ್ಯಗಳಿಗೆ, ಆದರ್ಶಗಳಿಗೆ ಹೆಸರಾದವನು. ಹೀಗಾಗಿ ಕ್ಷೇತ್ರದ ಮತದಾರರು ಯಾರನ್ನು ಗೆಲ್ಲಿಸಬೇಕೆಂಬುದನ್ನು ನಿರ್ಧರಿಸಲಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next