Advertisement

ಪ್ರಮೋದ್ ಮುತಾಲಿಕ್ ಸ್ಪರ್ಧೆ ಬಗ್ಗೆ ಕೊನೆಗೂ ಮೌನ ಮುರಿದ ಸಚಿವ ಸುನಿಲ್ ಕುಮಾರ್

05:09 PM Feb 04, 2023 | Team Udayavani |

ಬೆಂಗಳೂರು: ಪ್ರಮೋದ್ ಮುತಾಲಿಕ್ ಹಿಂದುತ್ವದ ಹೆಸರಿನಲ್ಲಿ ಯಾಕೆ ಸ್ಪರ್ಧೆಗೆ ಇಳಿದಿದ್ದಾರೆ? ಅದರಿಂದ ಯಾರಿಗೆ ಲಾಭ ಎಂಬುದನ್ನು ಬಿಡಿಸಿ ಹೇಳಬೇಕಾದ ಅಗತ್ಯವಿಲ್ಲ ಎಂದು ಇಂಧನ ಮತ್ತು ಕನ್ನಡ- ಸಂಸ್ಕ್ರತಿ ಸಚಿವ ವಿ. ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.

Advertisement

ತಮ್ಮ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಇದೇ ಮೊದಲ ಬಾರಿಗೆ ಅವರು ಮೌನ ಮುರಿದು ಮಾತನಾಡಿದ್ದಾರೆ.

ಆರ್ ಎಸ್ಎಸ್ ಹಾಗೂ ವಿಶ್ವ ಹಿಂದೂ ಪರಿಷತ್ ಬಿಟ್ಟು ತಾವೇಕೆ ಹೊರ ಹೋದರು ಎಂಬ ಬಗ್ಗೆ ಮುತಾಲಿಕರೇ ಉತ್ತರ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಈ ಹಿಂದೆ ಬಿಜೆಪಿಯ ಹಿರಿಯ ನಾಯಕ ಅನಂತ ಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಪ್ರಹ್ಲಾದ್ ಜೋಷಿಯವರ ವಿರುದ್ಧವೂ ಸ್ಪರ್ಧಿಸಿದ್ದರು. ಫಲಿತಾಂಶ ಏನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಕಾರ್ಕಳದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಅವರ ಮುಂದಿನ ಆಯ್ಕೆ ಯಾವುದೋ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.

ಪ್ರಮೋದ್ ಮುತಾಲಿಕರು ಕಾರ್ಕಳ ಕ್ಷೇತ್ರಕ್ಕೆ ಬಂದು ಹಿಂದುತ್ವದ ಹೆಸರಿನಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಆದರೆ ಕ್ಷೇತ್ರದಲ್ಲಿ ಹಿಂದುತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆಯಾಗಿಲ್ಲ. ಅವರು ಹಿಂದುತ್ವದ ಹೆಸರಿನಲ್ಲಿ ಏಕೆ ಚುನಾವಣೆ ಬಯಸುತ್ತಿದ್ದಾರೆ ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Advertisement

ಇದನ್ನೂ ಓದಿ:ಅಭಿವೃದ್ದಿ ವಿಚಾರ ಇಲ್ಲದವರು ಸಿ.ಡಿ. ಬಗ್ಗೆ ಮಾತನಾಡುತ್ತಾರೆ: ಪ್ರತಾಪ್ ಸಿಂಹ

ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದಾಗಿದೆ. ಮುತಾಲಿಕರು ತೆಗೆದುಕೊಂಡಿರುವ ನಿರ್ಧಾರವನ್ನು ನಾನ್ಯಾಕೆ ವಿರೋಧಿಸಲಿ? ಸುನಿಲ್ ಕುಮಾರ್ ಏನು ಎಂಬುದನ್ನು ಕಾರ್ಕಳದ ಜನತೆ ಕಳೆದ ಇಪ್ಪತ್ತು ವರ್ಷದಿಂದ ನೋಡಿದ್ದಾರೆ. ಮುಂದೆಯೂ ಅವರೇ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಮುತಾಲಿಕ್ ಅವರು ನನ್ನ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ. ಮುಂದೆಯೂ ಮಾಡಬಹುದು. ನಾನು ಆ ವಿಚಾರಗಳಿಗೆ ಉತ್ತರ ನೀಡಲು ಹೋಗುವುದಿಲ್ಲ. ನಾನು ಯಾರ ವಿರುದ್ಧವೂ ವೈಯಕ್ತಿಕ ಟೀಕೆ ಮಾಡುವುದಿಲ್ಲ. ಕಾರ್ಕಳದ ಅಭಿವೃದ್ದಿ ವಿಚಾರದ ಬಗ್ಗೆ ಕಾರ್ಕಳದ ಜನ ಪ್ರಶ್ನಿಸಿದರೆ ಉತ್ತರ ನೀಡುತ್ತೇನೆ ಎಂದು ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next