Advertisement

ಮೂಲ ಕಾಂಗ್ರೆಸ್ಸಿಗರ ಮೂಲೆ ಗುಂಪಾಗಿಸುವ ಉತ್ಸವ: ಸುನಿಲ್ ಕುಮಾರ್

08:25 PM Aug 02, 2022 | Team Udayavani |

ಮುಧೋಳ: ದಾವಣಗೆರೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಚರಿಸಿಕೊಳ್ಳುತ್ತಿರುವ ಅದ್ಧೂರಿ ಜನ್ಮದಿನ ಯಾವ ಪುರುಷಾರ್ಥಕ್ಕಾಗಿ ಎಂಬುದು ತಿಳಿಯುತ್ತಿಲ್ಲ ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

Advertisement

ಮುಗಳಖೋಡ ಗ್ರಾಮದಲ್ಲಿ ನಡೆದ 110 ಕೆ.ವಿ. ಉಪ ವಿದ್ಯುತ್‌ ಕೇಂದ್ರ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಚಿಂತನೆಯಿಂದ ಬಂದಿರುವ ಸಿದ್ದರಾಮಯ್ಯ ಅವರು ತಮ್ಮ ಜನ್ಮದಿನವನ್ನು ಕೋಟ್ಯಂತರ ರೂ. ವ್ಯಯಿಸಿ ಆಚರಿಸಿಕೊಳ್ಳುವ ಮೂಲಕ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗುಂಪಾಗಿಸಲು ಹೊರಟಿದ್ದಾರೆ ಎಂದು ಕುಟುಕಿದರು.

ಮುಂಬರುವ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹತ್ಯೆಗಳ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು, ನಾವು ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಿದ್ದೇವೆ. ತನಿಖೆ ಪ್ರಗತಿಯಲ್ಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next