Advertisement

ರಾಜ್ಯದ ಜನರ ಒಳಿತಿಗಾಗಿ ಕೆಲಸ ಮಾಡುವೆ : ಇಂಧನ ಸಚಿವ ಸುನಿಲ್ ಕುಮಾರ್ ಹೇಳಿಕೆ

06:16 PM Aug 09, 2021 | Team Udayavani |

ಬಂಟ್ವಾಳ : ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸತನವನ್ನು ತರುವ ಮೂಲಕ ರಾಜ್ಯದ ಜನತೆಗೆ ಒಳಿತನ್ನು ಮಾಡುತ್ತೇನೆ ಎಂದು ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.

Advertisement

ಅವರು ಇಂದು ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ಪತ್ರಕರ್ತರ ಜತೆ ಮಾತನಾಡಿದರು. ಮುಂದಿನ ಶುಕ್ರವಾರ ತಾನು ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವುದಕ್ಕೆ ಪೂರ್ವಭಾವಿಯಾಗಿ ರಾಜರಾಜೇಶ್ವರಿ ಭಕ್ತನಾದ ತಾನು ಇಂದು ಕ್ಷೇತ್ರಕ್ಕೆ ಭೇಟಿನೀಡಿ ಆಶೀರ್ವಾದ ಪಡೆದಿದ್ದೇನೆ. ಎಲ್ಲರ ಒಳಿತಿಗಾಗಿ ಕೆಲಸ ಮಾಡುತ್ತೇನೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದೇವಳದ ಕಾರ್ಯನಿರ್ವಣಾಧಿಕಾರಿ ಪಿ.ಜಯಮ್ಮ,ಆಡಳಿತ ಮೊಕ್ತೇಸರ ಡಾ! ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ಯು.ತಾರನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್, ಪಿ.ಮಾದವ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಗಿರಿಪ್ರಕಾಶ್ ತಂತ್ರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ವೆಂಕಟೇಶ ನಾವುಡ, ಯಶವಂತ ಪೊಳಲಿ, ನಂದರಾಮ ರೈ, ಪುರುಷೋತ್ತಮ ಶೆಟ್ಟಿ, ಪುಷ್ಪರಾಜ್ ಚೌಟ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ :ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಖ್ಯಾತ ಮಲಯಾಳಂ ನಟಿ ಶರಣ್ಯ ಶಶಿ ಸಾವು  

Advertisement

Udayavani is now on Telegram. Click here to join our channel and stay updated with the latest news.

Next