Advertisement

ತೀವ್ರ ಅನಾರೋಗ್ಯ: ಪತ್ರಕರ್ತ ರವಿ ಬೆಳಗೆರೆಗೆ ಮಧ್ಯಂತರ ಜಾಮೀನು ಮಂಜೂರು

04:20 PM Dec 13, 2017 | Team Udayavani |

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಸಿಟಿ ಸಿವಿಲ್ ಕೋರ್ಟ್ ಬುಧವಾರ ಕೇವಲ ಮೂರು ದಿನಗಳ ಮಧ್ಯಂತರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Advertisement

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

ತನಿಖೆಗೆ ಸಹಕರಿಸುವಂತೆ ಸೂಚಿಸಿರುವ ಕೋರ್ಟ್ ಕೆಲವು ಷರತ್ತು ವಿಧಿಸಿ ಡಿಸೆಂಬರ್ 16ರವರೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 1 ಲಕ್ಷ ರೂ. ಭದ್ರತೆ ಮತ್ತು ಇಬ್ಬರು ಶ್ಯೂರಿಟಿ ನೀಡಲು ತಿಳಿಸಿತ್ತು.

ಯಾವುದೇ ದೂರಿಲ್ಲದೇ ತನಿಖೆ ನಡೆಸಲಾಗಿದೆ. ಆರೋಪಿಯೊಬ್ಬನ ಹೇಳಿಕೆ ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕೆಂದು ವಕೀಲ ದಿವಾಕರ್ ಮನವಿ ಮಾಡಿಕೊಂಡರು. ಈ ವೇಳೆ ಮಧ್ಯಂತರ ಜಾಮೀನು ನೀಡುವ ಅಧಿಕಾರ ಇದೆಯೇ? ಎಂದು ಜಡ್ಜ್ ರವಿ ಬೆಳಗೆರೆ ಪರ ವಕೀಲರಾದ ದಿವಾಕರ್ ಗೆ ಪ್ರಶ್ನಿಸಿದ್ದರು.

 ರಾಜ್ಯ ಸರ್ಕಾರಿ ಅಭಿಯೋಜಕರ(ಪಬ್ಲಿಕ್ ಪ್ರಾಸಿಕ್ಯೂಟರ್) ಹಾಜರಿಗೆ ಜಡ್ಜ್ ಸೂಚಿಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next