Advertisement

Suntikoppa; ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆ ದಾಳಿ; ದಂಪತಿ ಪಾರು

12:13 AM Jun 25, 2023 | Team Udayavani |

ಸುಂಟಿಕೊಪ್ಪ: ಹಾಡಹಗಲು ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಯೊಂದು ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದೆ. ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್‌ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Advertisement

ಮತ್ತಿಕಾಡುವಿನ ಕಾಫಿ ಬೆಳೆಗಾರರಾದ ಕೋರನ ಟಿಪ್ಪು ಅವರು ಕಾರಿನಲ್ಲಿ ಪತ್ನಿಯೊಂದಿಗೆ ಸುಂಟಿಕೊಪ್ಪದಿಂದ ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಗೆ ಮರಳುತ್ತಿದ್ದಾಗ ಕುಟ್ಟೇಟಿ ತೋಟದ ಲೈನ್‌ ಮನೆಯ ಸಮೀಪ ಕಾಡಾನೆ ಅಡ್ಡಗಟ್ಟಿತು. ಅಪಾಯವನ್ನರಿತ ದಂಪತಿ ಕಾರಿನಿಂದ ಇಳಿದು ಓಡಿ ಹೋಗಿ ಜೀವ ಉಳಿಸಿಕೊಡರು. ಆನೆಯು ದಂತದಿಂದ ಕಾರಿನ ಮುಂಭಾಗಕ್ಕೆ ದಂತದಿಂದ ಗುದ್ದಿ ಹಾನಿಗೊಳಿಸಿ ಅಲ್ಲಿಂದ ತೆರಳಿತು. ಕಾರು ಜಖಂಗೊಂಡಿದ್ದು ಸಾವಿರಾರು ರೂ. ನಷ್ಟ ಸಂಭವಿಸಿದೆ.

ಮತ್ತಿಕಾಡು ವ್ಯಾಪ್ತಿಯ ತೋಟಗಳಲ್ಲಿ ಶನಿವಾರ ಬೆಳಗ್ಗಿನಿಂದ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಚರಣೆ ನಡೆಯುತ್ತಿದ್ದು ಇದರಿಂದ ಕೋಪಕ್ಕೀಡಾಗಿ ಓಡಿ ಬಂದ‌ ಸಲಗ ಎದುರು ಸಿಕ್ಕಿದ ಕಾರಿನ ಮೇಲೆ ದಾಳಿ ನಡೆಸಿದೆ.

ಲಾರಿ-ಬೈಕ್‌ ಢಿಕ್ಕಿ: ಬೈಕ್‌ ಸವಾರ ಸಾವು
ಕುಶಾಲನಗರ: ಲಾರಿ ಮತ್ತು ಬೈಕ್‌ ನಡುವೆ ಅಪಘಾತ ಉಂಟಾಗಿ ಬೈಕ್‌ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಕುಶಾಲನಗರ ಸಮೀಪ  ಕೈಗಾರಿಕಾ ಬಡಾವಣೆ ಬಳಿ ಗುರುವಾರ ತಡರಾತ್ರಿ ನಡೆದಿದೆ.

ಬೈಕ್‌ ಸವಾರ ಗಂಗಾಧರ ಮೃತಪಟ್ಟವರು.ತನ್ನ ಮನೆಗೆ ತೆರಳುವ ಸಂದರ್ಭ ಕೈಗಾರಿಕಾ ಬಡಾವಣೆಗೆ ಬರುತ್ತಿದ್ದ ಲಾರಿಯ ಟಯರ್‌ಗೆ ಸಿಲುಕಿ ಅನಂತರ ಲಾರಿ ದೇಹದ ಮೇಲೆ ಹರಿದ ಕಾರಣ ದೇಹದ ಭಾಗಗಳು ಛಿದ್ರ ಛಿದ್ರವಾಗಿದ್ದವು.

Advertisement

ಮೃತ ಗಂಗಾಧರ ಮೂಲತ ಅರಸೀಕೆರೆ ನಿವಾಸಿಯಾಗಿದ್ದು, ಕುಶಾಲನಗರದಲ್ಲಿ ವಿದ್ಯುತ್‌ ಕಂಬಗಳನ್ನು ನೆಡುವ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next