Advertisement

ಗಣಿನಾಡು ಬಳ್ಳಾರಿಯಲ್ಲಿ ಸೂಪರ್ ಸ್ಪೇಷಾಲಿಟಿ ಟ್ರಾಮಾ ಕೇರ್ ಸೆಂಟರ್ ಲೋಕಾರ್ಪಣೆ !

12:25 PM Aug 31, 2020 | Mithun PG |

ಬಳ್ಳಾರಿ:  ಗಣಿನಾಡು ಬಳ್ಳಾರಿಯಲ್ಲಿ ಸೂಪರ್ ಸ್ಪೇಷಾಲಿಟಿ ಟ್ರಾಮಾ ಕೇರ್ ಸೆಂಟರ್ ಲೋಕಾರ್ಪಣೆಗೊಂಡಿದೆ.

Advertisement

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇ-ವೇದಿಕೆ ಮೂಲಕ ಲೋಕಾರ್ಪಣೆ ಮಾಡಿದ್ದಾರೆ.  ಸುಮಾರು 10 ವರ್ಷಗಳಿಂದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿತ್ತು. ಇದೀಗ ಆಸ್ಪತ್ರೆಯ ಒಂದು ಭಾಗವಾದ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆಗೊಂಡಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಾಥ್ ನೀಡಿದ್ದು, ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರಾದ ನಾಗೇಂದ್ರ, ರಾಜ್ಯಸಭಾ ಸದಸ್ಯರಾದ ನಾಸೀರ್ ಹುಸೇನ್, ಎಂಎಲ್ಸಿ ಅಲ್ಲಂ ವೀರಭದ್ರಪ್ಪ, ಡಿಸಿ, ಎಸ್ಪಿ, ಸಿಇಓ ಭಾಗಿಯಾಗಿದ್ದರು.

ಆರೋಗ್ಯ ಸಚಿವ ಶ್ರೀ ರಾಮುಲು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಗೈರಾಗಿದ್ದರು,

Advertisement

2010 ರಲ್ಲಿ ಜನಾರ್ದನ ರೆಡ್ಡಿ ಉಸ್ತುವಾರಿ ಸಚಿವರಾಗಿದ್ದಾಗ ಭೂಮಿ ಪೂಜೆ ಮಾಡಿ ಚಾಲನೆ ನೀಡಲಾಗಿತ್ತು. ಇದೀಗ 10 ವರ್ಷಗಳ ನಂತರ ಲೋಕಾರ್ಪಣೆ ಯಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next