Advertisement

ಅಧೀಕ್ಷಕ ಎಂಜಿನಿಯರ್‌ ಸ್ವಯಂಪ್ರಭಾ ಅಮಾನತು

06:10 AM Jun 09, 2020 | Lakshmi GovindaRaj |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಬಿಬಿಎಂಪಿ ಪಶ್ಚಿಮ ವಲಯದ ಅಧೀಕ್ಷಕ ಎಂಜಿನಿಯರ್‌ ಕೆ. ಸ್ವಯಂಪ್ರಭಾ ಅವರನ್ನು ಬಿಬಿಎಂಪಿ ಆಯುಕ್ತ ಅಮಾನತು ಮಾಡಿ  ಆದೇಶ  ಮಾಡಿದ್ದಾರೆ.

Advertisement

ಈ ಮೂಲಕ ಕಳೆದ ಒಂದು ವಾರದಲ್ಲಿ ಕರ್ತವ್ಯ ಲೋಪದ ಆಧಾರದ ಮೇಲೆ ಬಿಬಿಎಂಪಿಯ ಮೂವರು ಅಧಿಕಾರಿಗಳು ಅಮಾನತುಗೊಂಡಂತಾಗಿದೆ. ಪಾಲಿಕೆ ಪಶ್ಚಿಮ ವಲಯದಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸುಳ್ಳು ಬಿಲ್‌ಗ‌ಳನ್ನು ಸೃಷ್ಟಿಸಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ.

ಇದರಿಂದ ಪಾಲಿಕೆಯ ಬೊಕ್ಕಸಕ್ಕೆ ಅಪಾರ ನಷ್ಟವುಂಟಾಗುತ್ತಿದೆ ಎಂದು ಆರೋಪಿಸಿ ದಸಂಸ ಎನ್‌. ಎಸ್‌. ಪ್ರಸಾದ್‌ ಕೆಲವು ದಾಖಲೆಗಳನ್ನು ಬಿಬಿಎಂಪಿಯ  ಟಿವಿಸಿಸಿ (ತಾಂತ್ರಿಕ ಕಣ್ಗಾವಲು ಕೋಶ)ಗೆ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿತ್ತು.

ಅಲ್ಲದೆ, ಅಗತ್ಯ ಮಾಹಿತಿಯನ್ನು ಆದ್ಯತೆಯ ಮೇರೆಗೆ ಟಿವಿಸಿಸಿಗೆ ಸಲ್ಲಿಸುವಂತೆ ಸೂಚನೆ  ನೀಡಲಾಗಿತ್ತು. ಆದರೆ, ಮೇಲಧಿಕಾರಿಗಳ ಸೂಚನೆ ಪಾಲಿಸದೆ ಹಾಗೂ ಅಗತ್ಯ ಸಹಕಾರ ನೀಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಸ್ವಯಂಪ್ರಭಾ ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಆಯುಕ್ತರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next