Advertisement
ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆ, ಪೂಜಾ ಮಂದಿರ ಕೈಪುಂಜಾಲು ಹಾಗೂ ಕೈಪುಂಜಾಲು ಜೈ ವೀರ ಮಾರುತಿ ಹಗ್ಗಜಗ್ಗಾಟ ತಂಡದ ಸಹಯೋಗದಲ್ಲಿ ಪೂಜಾ ಮಂದಿರದ 36ನೇ ವಾರ್ಷಿಕ ಮಹೋತ್ಸವದ ಪ್ರಯುಕ್ತ ಕೈಪುಂಜಾಲು ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಅಂತಾರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಹಗ್ಗಜಗ್ಗಾಟ ಜೈ ವೀರ ಮಾರುತಿ ಟ್ರೋಫಿ-2017 ಪಂದ್ಯಾಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅದಾನಿ ಯುಪಿಸಿಎಲ್ ಸಮೂಹ ಸಂಸ್ಥೆಯ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ ಹಗ್ಗ ಜಗ್ಗಾಟ ಪಂದ್ಯಾಟದ ಅಂಗಣವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಚಿನ್ನದ ಪದಕ ವಿಜೇತೆ ರಾಷ್ಟ್ರ ಮಟ್ಟದ ಕರಾಟೆ ಪಟು ಸಪ್ತಶ್ರೀ ಅವರನ್ನು ಸಮ್ಮಾನಿಸಲಾಯಿತು.36ನೇ ವಾರ್ಷಿಕೋತ್ಸವ ಸಮಿತಿ ಗೌರವಾಧ್ಯಕ್ಷ ಸುಧಾಕರ ಡಿ. ಅಮೀನ್ ಪಾಂಗಾಳ, ಉಪಾಧ್ಯಕ್ಷ ಪ್ರಭಾಕರ ಪೂಜಾರಿ, ಗೌ.ಪ್ರ. ಕಾರ್ಯದರ್ಶಿ ಯೋಗೀಶ್ ವಿ.ಟಿ., ಕೋಶಾಧಿಕಾರಿ ದಿನೇಶ್ ಕುಂದರ್ ಉಪಸ್ಥಿತರಿ ದ್ದರು. ಸಪ್ತಶ್ರೀ ಕೈಪುಂಜಾಲು ಸ್ವಾಗತಿಸಿ ದರು. ರಾಜೇಶ್ ಕೋಟ್ಯಾನ್ ವರದಿ ವಾಚಿಸಿದರು. ಸಮಿತಿ ಅಧ್ಯಕ್ಷ ಸತೀಶ್ ಕೆ. ಕುಂದರ್ ವಂದಿಸಿದರು. ಉಪನ್ಯಾಸಕ ಶಿವಣ್ಣ ಬಾಯರ್ ಕಾರ್ಯಕ್ರಮ ನಿರೂಪಿಸಿದರು.