Advertisement

ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್‌ ಮಂಡನೆ

06:23 AM Feb 05, 2019 | Team Udayavani |

ಬೆಂಗಳೂರು: ಮುಂಬರುವ ಬಜೆಟ್‌ನಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿ, ರೈತರ, ಅಸಂಘಟಿತ ಕಾರ್ಮಿಕರ ಪರವಾಗಿರುವ ಮತ್ತು ಮಧ್ಯಮ ವರ್ಗದ ಆಶಯಕ್ಕೆ ಪೂರಕವಾಗಿರುವ ಬಜೆಟ್‌ ಮಂಡಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಸೋಮವಾರ ಪತ್ರಿಕೆಗಳ ಸಂಪಾದಕರ ಜತೆ ಸಂವಾದ ನಡೆಸಿದ ಅವರು, ಆಟೋಚಾಲಕರ ಸಂಘಟನೆಗಳು, ಗಾರ್ಮೆಂಟ್ಸ್‌ ನೌಕರರು ಮತ್ತಿತರ ಅಸಂಘಟಿತ  ಕ್ಷೇತ್ರಗಳ ಪ್ರತಿನಿಧಿಗಳ ಸಲಹೆಗಳನ್ನೂ ಬಜೆಟ್‌ ರೂಪಿಸುವಲ್ಲಿ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಸರ್ಕಾರ ಜಾರಿಗೊಳಿಸಿದ್ದ ಅನ್ನಭಾಗ್ಯ, ರೈತರಿಗೆ ಉಚಿತ ವಿದ್ಯುತ್‌ನಂತಹ ಯೋಜನೆಗಳನ್ನು ಮುಂದುವರಿಸಲಾಗಿದೆ. ಒಟ್ಟಾರೆಯಾಗಿ ಸುಮಾರು 11,000 ಕೋಟಿ ರೂ.ಗಳನ್ನು ಸರ್ಕಾರದಿಂದ ಒದಗಿಸಲಾಗಿದೆ.  45,000 ಕೋಟಿ ರೂ. ಸಾಲಮನ್ನಾಕ್ಕಾಗಿ ಮೀಸಲಿರಿಸಲಾಗಿದೆ.

ಉಳಿದಂತೆ 85% ಬಿಪಿಎಲ್‌ ಕಾರ್ಡ್‌ ಹೊಂದಿರುವವರ ಬಗ್ಗೆ ಸರ್ಕಾರ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದು  ಹೇಳಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಘೋಷಣೆಯಾದ ರೈತಬೆಳಕು ಯೋಜನೆ ಬಗ್ಗೆ ಪ್ರಸ್ತಾಪಿಸಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ,3,500 ಕೋಟಿ ರೂ ಅನುದಾನದ ಘೋಷಣೆಯಾಗಿತ್ತು. ಆದರೆ, 1,000 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು.

ತಾವು ಆಡಳಿತಕ್ಕೆ ಬಂದ ಮೇಲೆ ಆ ಯೋಜನೆ ಸ್ಥಗಿತವಾಗಿರುವ ಬಗ್ಗೆ ತಮಗೇನೂ ಬೇಸರವಿಲ್ಲ. ರೈತರ ಸಾಲಮನ್ನಾ ತಮಗೆ ತೃಪ್ತಿ ತಂದಿದೆ ಎಂದು ತಿಳಿಸಿದರು. ವಿವಿಧ ಭಾಗ್ಯಗಳು, ರೈತರ ಸಾಲಮನ್ನಾ ಯೋಜನೆಗಳು ಜನರ ಸಮಸ್ಯೆಯನ್ನು ನಿಜವಾಗಿ ಪರಿಹರಿಸುತ್ತವೆ ಎನ್ನುವುದರ ಬಗ್ಗೆ ಖಾತ್ರಿಯಿಲ್ಲ. ಅನಿವಾರ್ಯ ಸಂದರ್ಭಗಳಲ್ಲಿ, ಚುನಾವಣಾ ಪ್ರಣಾಳಿಕೆಗಳಿಗೆ ಅನುಗುಣವಾಗಿ ಕೆಲವು ನಿರ್ಧಾರಗಳನ್ನು ಪ್ರಕಟಿಸಬೇಕಾಗುತ್ತದೆ ಎಂದ ಅವರು, ಒಟ್ಟಾರೆ ಅಬಿವೃದ್ಧಿಗೆ ಪೂರಕವಾಗಿ ಬಜೆಟ್‌ ಮಂಡಿಸುವುದಾಗಿ ಹೇಳಿದರು.  

Advertisement

ಪ್ರಧಾನಿಗೆ ಪತ್ರ: ಆಯುಷ್ಮಾನ್‌ ಭಾರತ್‌ ಯೋಜನೆಯಲ್ಲಿ ಕರ್ನಾಟಕದ ಕೊಡುಗೆ ಮಹತ್ವದ್ದಾಗಿದ್ದರೂ ಪ್ರಧಾನಿ ಮೋದಿ ಅವರ ಚಿತ್ರವನ್ನು ಪ್ರಕಟಿಸಿ ಯೋಜನೆ ಕೇಂದ್ರ ಸರ್ಕಾರದ್ದೇ ಎನ್ನುವ ರೀತಿಯಲ್ಲಿ ಪ್ರದರ್ಶನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಕಟಕಿಯಾಡಿದ್ದಾರೆ.

ರಾಜ್ಯಸರ್ಕಾರದಿಂದ ಸುಮರು 130 ಕೊಟಿ ರೂ. ಯೋಜನೆಗೆ ಒದಗಿಸಲಾಗುತ್ತಿದೆ. ಕೇಂದ್ರ ಸರ್ಕಾರ ಕೇವಲ 30 ಕೊಟಿ ರೂ.ಗಳನ್ನು  ಕೇಂದ್ರ ನೀಡುತ್ತಿದೆ. ದೇಶದೆಲ್ಲೆಡೆ ಈ ರೀತಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಕೊಡುಗೆ ಮಹತ್ವದ್ದಾಗಿರುವುದರಿಂದ ಆ ಬಗ್ಗೆ ಪ್ರಕಟಣೆಗಳಲ್ಲಿ,

ಕೇಂದ್ರ ನಡೆಸುತ್ತಿರುವ ಪ್ರಚಾರದಲ್ಲಿ ಉಲ್ಲೇಖೀಸಬೇಕೇಂದು ತಿಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ಆ ಕಾರಣಕ್ಕಾಗಿ ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆದಿದೆ ಎಂದೂ ಅವರು ಹೇಳಿದ್ದಾರೆ.  

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರ ಸಿಬಿಐ ತನಿಖಾ ಸಂಸ್ಥೆಯನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾದುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲಿ ನಡೆದಿರುವ ಘಟನೆ ರಾಜ್ಯ ಸರ್ಕಾರಗಳ ಸ್ವಾಯತ್ತತೆಗೆ ಧಕ್ಕೆ ತರುವ ವಿಚಾರವಾಗಿದೆ. ತಾವು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರವಾಗಿ ನಿಲ್ಲುತ್ತೇನೆ.
-ಎಚ್‌.ಡಿ. ಕುಮಾರಸ್ವಾಮಿ 

Advertisement

Udayavani is now on Telegram. Click here to join our channel and stay updated with the latest news.

Next