Advertisement
ಜಿಪಂ ಸಭಾಂಗಣದಲ್ಲಿ ಸೋಮವಾರ ನಗರದ ಎಲ್ಲ ಪ್ರಮುಖ ಆಸ್ಪತ್ರೆಗಳ ವೈದ್ಯಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಂಗನಕಾಯಿಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ರೋಗ ನಿಯಂತ್ರಣದಲ್ಲಿ ಖಾಸಗಿ ಸಹಭಾಗಿತ್ವದ ಅಗತ್ಯ ಕುರಿತು ಅವರು ಮಾತನಾಡಿದರು.
Related Articles
Advertisement
ಸುಬ್ಬಯ್ಯ ಹಾಗೂ ಸಹ್ಯಾದ್ರಿ ನಾರಾಯಣ ಹೃದಯಾಲಯದ ವತಿಯಿಂದ ಎರಡು ಸಂಚಾರಿ ಘಟಕ ಒದಗಿಸಲಾಗುವುದು ಎಂದು ಸಭೆಯಲ್ಲಿ ಸಂಬಂಧಪಟ್ಟ ಆಸ್ಪತ್ರೆಗಳ ಅಧಿಕಾರಿಗಳು ತಿಳಿಸಿದರು. ಇನ್ನುಳಿದಂತೆ ಐಎಂಎ ಸಮನ್ವಯದೊಂದಿಗೆ ಒಂದೆರಡು ದಿನಗಳಲ್ಲಿ ಸಂಚಾರಿ ಘಟಕಗಳನ್ನು ಒದಗಿಸುವುದು ಹಾಗೂ ವೈದ್ಯಾಧಿಕಾರಿಗಳ ಸೇವೆ ಒದಗಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ಆಸ್ಪತ್ರೆಗಳ ಪ್ರತಿನಿಧಿಗಳು ಹೇಳಿದರು.
ಎಡಿಸಿ ಅನುರಾಧಾ, ಡಿಎಚ್ಒ ರಾಜೇಶ್ ಸುರಗಿಹಳ್ಳಿ, ಐಎಂಎ ಅಧ್ಯಕ್ಷ ಡಾ| ಪಿ.ಕೆ. ಪೈ, ಡಾ| ಎಚ್.ಆರ್. ದೇವೇಂದ್ರಪ್ಪ, ಮ್ಯಾಕ್ಸ್ ಆಸ್ಪತ್ರೆಯ ಡಾ| ಹರೀಶ್, ಡಾ| ಧನಂಜಯ ಸರ್ಜಿ, ಸಹ್ಯಾದ್ರಿ ಆಸ್ಪತ್ರೆ ನಿರ್ದೇಶಕ ಪ್ರಶಾಂತ್ ದೇಸಾಯಿ, ಡಾ| ಸುಜಿತ್, ಇತರೆ ಪ್ರಮುಖ ಆಸ್ಪತ್ರೆಗಳ ಪ್ರತಿನಿಧಿಗಳು ಇದ್ದರು.
•ಮಂಗನಕಾಯಿಲೆ ಕಾಣಿಸಿಕೊಳ್ಳುವ ಪ್ರದೇಶದ ರೂಟ್ಮ್ಯಾಪ್ ಸಿದ್ಧ
•ಆರಂಭದ ಹಂತದಲ್ಲಿ ಮಂಗನ ಕಾಯಿಲೆ ದೃಢಪಟ್ಟರೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಲು ಸಾಧ್ಯ
•ಸುಬ್ಬಯ್ಯ, ಸಹ್ಯಾದ್ರಿ ನಾರಾಯಣ ಹೃದಯಾಲಯದ ವತಿಯಿಂದ ಎರಡು ಸಂಚಾರಿ ಘಟಕ ಆರಂಭಿಸಲು ಒಪ್ಪಿಗೆ
ಡಿಸಿ ದಿಢೀರ್ ಭೇಟಿಮಂಗನ ಕಾಯಿಲೆ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಡಿಸಿ ಕೆ.ಎ. ದಯಾನಂದ್ ಸೋಮವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ರೋಗ ಚಿಕಿತ್ಸೆ ಹಾಗೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಪಂ, ಮಾಳೂರು ಪ್ರಾಥಮಿಕ ಆರೋಗ್ಯ ಕೇಂದ್ರ, ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.