Advertisement

ಮಾದರಿ ಕ್ಷೇತ್ರ ಮಾಡಲು ಬೆಂಬಲಿಸಿ: ಸೂರ್ಯಕಾಂತ

12:48 PM May 05, 2018 | Team Udayavani |

ಬೀದರ: ಕ್ಷೇತ್ರದಲ್ಲಿ 10 ವರ್ಷಗಳಿಂದ ನಿರಂತರ ಜನಸೇವೆಯಲ್ಲಿದ್ದೇನೆ. ಬೀದರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ನನ್ನನ್ನು ಬೆಂಬಲಿಸಬೇಕು ಎಂದು ಬೀದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.

Advertisement

ನಗರದ ಸಂಗಮೇಶ್ವರ ಕಾಲೋನಿ, ಮೈಲೂರ, ಸಿಎಂಸಿ ಕಾಲೋನಿ, ಅಗ್ರಿಕಲ್ಚರ್‌ ಕಾಲೋನಿ, ಮಂಗಲಪೇಟೆ ಮತ್ತಿತರ
ಕಡೆ ಪಾದಯಾತ್ರೆ ನಡೆಸಿ ಮತಯಾಚಿಸಿ ಮಾತನಾಡಿದ ಅವರು, ಎರಡು ವರ್ಷಗಳ ಹಿಂದೆ ವೈಯಕ್ತಿಕವಾಗಿ ಟ್ಯಾಂಕರ್‌ ಮೂಲಕ ಉಚಿತವಾಗಿ ನೀರು ಪೂರೈಸಿ ನಗರದ ಜನರಿಗೆ ಕೈಲಾದ ಸಹಾಯ ಮಾಡಿದ್ದೇನೆ. ಪ್ರತಿ ವರ್ಷ ಬೇಸಿಗೆಯಲ್ಲಿ ಉಲ್ಬಣಿಸುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮತದಾರ ಪ್ರಭುಗಳು ನನ್ನನ್ನು ಬೆಂಬಲಿಸಬೇಕು. ಬರಮುಕ್ತ ಬೀದರ ನಿರ್ಮಾಣಕ್ಕೆ ನನಗೆ ಶಕ್ತಿ ಕೊಡಬೇಕು ಎಂದು ಮನವಿ ಮಾಡಿದರು.

ತಂದೆ ದಿ. ಗುರುಪಾದಪ್ಪ ಅವರು ಬೀದರ ಡಿಸಿಸಿ ಬ್ಯಾಂಕ್‌ ಮೂಲಕ ಇಡೀ ಜಗತ್ತಿಗೆ ಸ್ವಸಹಾಯ ಗುಂಪುಗಳ ಕಲ್ಪನೆ  ಪರಿಚಯಿಸಿದ್ದರು. ಮಹಿಳಾ ಸ್ವಸಹಾಯ ಗುಂಪುಗಳಿಗೆ ಒಂದು ಲಕ್ಷ ರೂಪಾಯಿವರೆಗೆ ಸಾಲ ಕೊಟ್ಟಿದ್ದರು. 13 ಮಹಿಳೆಯರಿಂದ ಆರಂಭವಾದ ಸ್ವಸಹಾಯ ಗುಂಪುಗಳಲ್ಲಿ ಇಂದು 3.73 ಲಕ್ಷ ಸದಸ್ಯರಿದ್ದಾರೆ. ಮಹಿಳೆಯರು ಬ್ಯಾಂಕ್‌ಗಳಲ್ಲಿ 140 ಕೋಟಿ ರೂ. ಠೇವಣಿ ಇಟ್ಟಿದ್ದಾರೆ. ವಾರ್ಷಿಕ 600 ಕೋಟಿ ರೂ. ವಹಿವಾಟು ನಡೆಸುತ್ತಿದ್ದಾರೆ ಎಂದು ಹೇಳಿದರು. 

ಎರಡು ವರ್ಷಗಳ ಹಿಂದೆ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಡಿಸಿಸಿ ಬ್ಯಾಂಕ್‌ನಿಂದ 1.52 ಲಕ್ಷ ರೈತರ ಬೆಳೆ ವಿಮೆ ಮಾಡಿಸಿದ್ದರಿಂದ ದೇಶದಲ್ಲೇ ಅತಿಹೆಚ್ಚು ಅಂದರೆ 248 ಕೋಟಿ ರೂ. ಪರಿಹಾರ ಬೀದರಿಗೆ ಸಿಕ್ಕಿದೆ. ರೈತರಿಗೆ ತಲಾ 30 ಸಾವಿರದಿಂದ 4 ಲಕ್ಷ ರೂಪಾಯಿವರೆಗೂ ಪರಿಹಾರ ದೊರೆತಿದೆ ಎಂದು ಹೇಳಿದರು.

ದಿ| ಗುರುಪಾದಪ್ಪ ನಾಗಮಾರಪಳ್ಳಿ ಅವರು ಬೀದರನಲ್ಲಿ ರಾಜ್ಯದಲ್ಲೇ ಮೊಟ್ಟ ಮೊದಲ ಸಹಕಾರ ಆಸ್ಪತ್ರೆ ಪ್ರಾರಂಭಿಸಿದ್ದರು. ಆಸ್ಪತ್ರೆಯಿಂದ ಜಿಲ್ಲೆಯ ರೋಗಿಗಳು ಚಿಕಿತ್ಸೆಗಾಗಿ ಹೈದರಾಬಾದ್‌, ಸೊಲ್ಲಾಪುರ, ಬೆಂಗಳೂರಿಗೆ ಹೋಗುವುದು ತಪ್ಪಿದೆ. ತಂದೆಯವರ ಆಸೆಯಂತೆ ನಾನು ಆಸ್ಪತ್ರೆ ಅಧ್ಯಕ್ಷನಾದ ನಂತರ ಆಸ್ಪತ್ರೆಯಲ್ಲಿ 2 ಸಾವಿರ ರೂ.ಗಳಲ್ಲಿ ಸಾಮಾನ್ಯ ಹೆರಿಗೆ, 10 ಸಾವಿರ ರೂ.ಗಳಲ್ಲಿ ಸಿಸೇರಿಯನ್‌ ಯೋಜನೆ ಆರಂಭಿಸಿದೆ. ಇದರಿಂದ ನೂರಾರು ಬಡ ಜನರಿಗೆ ಅನುಕೂಲವಾಗಿದೆ. ಆಸ್ಪತ್ರೆಯಲ್ಲಿ ಅತ್ಯಾಧುನಿಕ ಯಂತ್ರಗಳನ್ನು ಸ್ಥಾಪಿಸಿದ್ದರಿಂದ ಸ್ಥಳೀಯವಾಗಿಯೇ ಕೈಗೆಟುಕುವ ದರದಲ್ಲಿ ವಿವಿಧ ಪರೀಕ್ಷೆ ಹಾಗೂ ವೈದ್ಯಕೀಯ ಸೇವೆ ದೊರೆಯುತ್ತಿದೆ ಎಂದು ಹೇಳಿದರು.

Advertisement

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಕುಮಾರ ಕಾಂಗೆ, ಮುಖಂಡರಾದ ಉಪೇಂದ್ರ ದೇಶಪಾಂಡೆ, ಫರ್ನಾಂಡೀಸ್‌
ಹಿಪ್ಪಳಗಾಂವ, ಡಾ| ಅಮರ ಏರೋಳಕರ, ಶಶಿಕುಮಾರ ಪಾಟೀಲ ಸಂಗಮ, ರಾಜು ಹತ್ತಿ, ಶಿವಕುಮಾರ ಭಾಲ್ಕೆ, ರಾಜೇಶ, ಸಂಗಮೇಶ ಗುಮ್ಮಾ, ಕಲ್ಯಾಣರಾವ್‌ ಬಿರಾದಾರ, ಹರೀಶ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next