Advertisement

ಸೈನಿಕರ ಮೇಲೆ ಗೌರವ ಇದ್ದರೆ ತೇಜ್‌ ಬಹದ್ದೂರ್‌ ಬೆಂಬಲಿಸಿ

11:32 PM Apr 12, 2019 | Team Udayavani |

ಬೆಂಗಳೂರು: “ನಿಮಗೆ ನಿಜವಾಗಿ ಸೈನ್ಯ ಮತ್ತು ಸೈನಿಕರ ಮೇಲೆ ಗೌರವ ಇದ್ದರೆ ನಿಮ್ಮ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿರುವ ದೇಶಕ್ಕಾಗಿ ದುಡಿದ ಹೆಮ್ಮೆಯ ಸೈನಿಕ ತೇಜ್‌ ಬಹದ್ದೂರ್‌ ಅವರನ್ನು ಬಹಿರಂಗವಾಗಿ ಬೆಂಬಲಿಸಿ’ ಎಂದು ಸೈನಿಕರ ಸಾಧನೆಯನ್ನು ಬಹಿರಂಗವಾಗಿ ಕೊಂಡಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್‌ ಮೂಲಕ ಸಲಹೆ ನೀಡಿದ್ದಾರೆ.

Advertisement

ತೇಜ್‌ ಬಹದ್ದೂರ್‌ ಅವರಿಗೆ ಬಹಿರಂಗವಾಗಿ ಬೆಂಬಲಿಸಿ, ಚುನಾವಣೆಯಿಂದ ಹಿಂದೆ ಸರಿಯಿರಿ. ಒಬ್ಬ ಸೈನಿಕ ಆಯ್ಕೆಯಾಗುವುದನ್ನು ನೀವು ಬೆಂಬಲಿಸುವುದಿಲ್ಲವೇ ಎಂದು ಸಿದ್ದರಾಮಯ್ಯ ಟ್ವೀಟ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next