Advertisement

ಇಸ್ರೋ ಬೇಹುಗಾರಿಕೆ: ಸುಪ್ರೀಂಗೆ ತಜ್ಞರ ವರದಿ

10:19 PM Apr 03, 2021 | Team Udayavani |

ನವದೆಹಲಿ: ಇಸ್ರೋದಲ್ಲಿ ಬೇಹುಗಾರಿಕೆ ಪ್ರಕರಣದಲ್ಲಿ ಮಾಜಿ ವಿಜ್ಞಾನಿ ನಂಬಿ ನಾರಾಯಣನ್‌ ಅವರ ಕಾನೂನು ಬಾಹಿರ ಬಂಧನ ಕುರಿತು ಸೂಕ್ತ ತನಿಖೆಗಾಗಿ ಸುಪ್ರೀಂ ಕೋರ್ಟ್‌ ನೇಮಿಸಿದ್ದ ಉನ್ನತ ಮಟ್ಟದ ಸಮಿತಿ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

Advertisement

ಇಸ್ರೋದಲ್ಲಿ ಬೇಹುಗಾರಿಕೆ ನಡೆಸಿದ ಆರೋಪದಡಿ, ಆಗ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿದ್ದ ನಂಬಿ ನಾರಾಯಣನ್‌ ಅವರನ್ನು ಬಂಧಿಸಲಾಗಿತ್ತು. ಆನಂತರ ನಡೆದ ಕಾನೂನು ಹೋರಾಟದಲ್ಲಿ ನಾರಾಯಣನ್‌ ಅವರು ಮಾನಸಿಕವಾಗಿ ತೀವ್ರ ಕಿರುಕುಳಕ್ಕೊಳಗಾಗಿದ್ದರು. ಇವರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂ ಕೋರ್ಟ್‌, 2018ರ ಸೆ. 14ರಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಡಿ.ಕೆ. ಜೈನ್‌ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ನೇಮಿಸಿ, ಇಡೀ ಪ್ರಕರಣವನ್ನು ಮರು ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ಇದನ್ನೂ ಓದಿ :ಶಿರ್ವ :ಬಟ್ಟೆ ಖರೀದಿಗೆಂದು ತಾಯಿಜೊತೆ ಬಂದು ನಾಪತ್ತೆಯಾಗಿದ್ದ ಮಗು ಶವವಾಗಿ ಬಾವಿಯಲ್ಲಿ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next