Advertisement

ಬಿಸಿಸಿಐ ಪ್ರಕರಣ: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್‌

11:51 PM Jul 20, 2022 | Team Udayavani |

ಹೊಸದಿಲ್ಲಿ: ಅಧ್ಯಕ್ಷ ಸೌರವ್‌ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್‌ ಶಾ ಸೇರಿದಂತೆ ಅದರ ಪದಾಧಿಕಾರಿಗಳ ಅಧಿಕಾರಾವಧಿಗೆ ಸಂಬಂಧಿಸಿ ತನ್ನ ಸಂವಿಧಾನದಲ್ಲಿ ತಿದ್ದುಪಡಿ ಮಾಡುವಂತೆ ಕೋರಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಸಲ್ಲಿಸಿದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ.

Advertisement

ಮುಖ್ಯ ನ್ಯಾಯಮೂರ್ತಿ ಎನ್‌. ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಬಿಸಿಸಿಐ ಪರವಾಗಿ ಹಾಜರಾದ ಹಿರಿಯ ವಕೀಲ ಹರೀಶ್‌ ಸಾಳ್ವೆ ಅವರು ಮುಂದೂಡುವಂತೆ ಕೋರಿದ ಮನವಿಯಂತೆ ಅನಂತರ ಪ್ರಕರಣವನ್ನು ಗುರುವಾರಕ್ಕೆ ಮುಂದೂಡಿತು.

ತಾಂತ್ರಿಕವಾಗಿ ಅವಧಿ ಮುಗಿದ ಅನಂತರವೂ ಪದಾಧಿಕಾರಿಗಳು ಕಚೇರಿಯಲ್ಲಿ ಮುಂದುವರಿಯುತ್ತಿದ್ದಾರೆ ಎಂದು ಬಿಹಾರ ಕ್ರಿಕೆಟ್‌ ಸಂಸ್ಥೆಯ ವಕೀಲರು ತಿಳಿಸಿದ್ದಾರೆ. ಇದಕ್ಕೆ ಉತ್ತರಿಸಿದ ಬೆಂಚ್‌ “ನಾಳೆ! ಒಂದು ದಿನದಲ್ಲಿ ಏನೂ ಆಗುವುದಿಲ್ಲ! ಏನು ಆತುರ? ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next