Advertisement

Politics: ಶರದ್‌ ಪವಾರ್‌ ಬಣದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ

09:07 PM Feb 16, 2024 | Team Udayavani |

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಬಣವೇ ನಿಜವಾದ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ(ಎನ್‌ಸಿಪಿ) ಎಂದು ತೀರ್ಪು ನೀಡಿರುವ ಚುನಾವಣಾ ಆಯೋಗದ ವಿರುದ್ಧ ಎನ್‌ಸಿಪಿ ಸ್ಥಾಪಕ ಶರದ್‌ ಪವಾರ್‌ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ಶುಕ್ರ ವಾರ ಒಪ್ಪಿದೆ. ಅಜಿತ್‌ ಬಣವೇ ನಿಜವಾದ ಎನ್‌ಸಿಪಿ ಎಂದು ಆಯೋಗ ತೀರ್ಪಿತ್ತು, ಪಕ್ಷದ ಚಿಹ್ನೆಯನ್ನೂ ಆ ಬಣಕ್ಕೆ ನೀಡಿತ್ತು.

Advertisement

ಇದರ ಬೆನ್ನಲ್ಲೇ ವಿಧಾನಸಭಾ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಕೂಡ ಅಜಿತ್‌ ಬಣವೇ ನಿಜವಾದ ಎನ್‌ಸಿಪಿ ಎಂದಿದ್ದರು. ಈ ಹಿನ್ನೆಲೆಯಲ್ಲಿ ಶರದ್‌ ಬಣ, ತೀರ್ಪಿನ ವಿರುದ್ಧ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂಗೆ ಅರಿಕೆ ಮಾಡಿತ್ತು. ಫೆ.19ರಂದು ವಿಚಾ ರಣೆ ನಡೆಯುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next