Advertisement

ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದ ಸುಪ್ರೀಂ ಕೋರ್ಟ್

04:12 PM Aug 19, 2021 | Team Udayavani |

ಹೊಸದಿಲ್ಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಯಾಗಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕರ್ನಾಟಕದ ಬಳ್ಳಾರಿಯಲ್ಲಿ ಎಂಟು ವಾರಗಳ ಕಾಲ ಉಳಿಯಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

Advertisement

ಬಳ್ಳಾರಿಯಲ್ಲಿ ಉಳಿಯಲು ಅವಕಾಶ ಮಾಡಿಕೊಡಬೇಕೆಂದು ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಇದರ ವಿಚಾರಣೆ ನಡೆಸಿದ ನ್ಯಾ.ವಿನೀತ್ ಶರಣ್ ಅವರ ನೇತೃತ್ವದ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.

ಇದನ್ನೂ ಓದಿ:ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಾರೀ ಗುಂಡಿನ ಕಾಳಗ: ಸೇನಾ ಅಧಿಕಾರಿ ಹುತಾತ್ಮ

ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಯಾಗಿರುವ ಗಾಲಿ ಜಣಾರ್ಧನ ರೆಡ್ಡಿಯವರಿಗೆ ಅವರ ಸ್ವಂತ ಜಿಲ್ಲೆ ಬಳ್ಳಾರಿಗೆ ತೆರಳಲು ಈ ಹಿಂದೆ ಕೋರ್ಟ್ ಅನುಮತಿ ನಿರಾಕರಿಸಿತ್ತು. ಇದೀಗ ವಿಶೇಷ ಮನವಿಯನ್ವಯ ಎಂಟು ವಾರಗಳ ಕಾಲ ತೆರಳಲು ಅನುಮತಿ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next