Advertisement

ಪಶ್ಚಿಮ ಬಂಗಾಳ ಬಿಜೆಪಿ ನಾಯಕರ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

07:58 PM Feb 25, 2022 | Team Udayavani |

ನವದೆಹಲಿ: ಸ್ಥಳೀಯ ಚುನಾವಣೆ ವೇಳೆ ಕೇಂದ್ರೀಯ ಪಡೆಗಳನ್ನು ನಿಯೋಜಿಸಬೇಕೆಂದು ಕೋರಿ ಪಶ್ಚಿಮ ಬಂಗಾಳ ಬಿಜೆಪಿ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

Advertisement

ಫೆ.27ರಂದು ನಡೆಯಲಿರುವ 108 ನಗರಪಾಲಿಕೆಗಳ ಚುನಾವಣೆ ವೇಳೆ ಪ್ರತಿ ಪಾಲಿಕೆಯ ಪರಿಸ್ಥಿತಿಯನ್ನು ರಾಜ್ಯ ಚುನಾವಣಾ ಆಯುಕ್ತರು ಪರಿಶೀಲನೆ ನಡೆಸಬೇಕು ಎಂದು ಇತ್ತೀಚೆಗೆ ಕಲ್ಕತ್ತಾ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಅದನ್ನು ಪ್ರಶ್ನಿಸಿ ಹಾಗೂ ಕೇಂದ್ರೀಯ ಪಡೆಗಳನ್ನು ಪಾಲಿಕೆ ಚುನಾವಣೆ ವೇಳೆ ನಿಯೋಜಿಸಬೇಕು ಎಂದು ಕೋರಿ ಬಿಜೆಪಿ ನಾಯಕರು ಸುಪ್ರೀಂ ಮೆಟ್ಟಿಲೇರಿದ್ದರು. ಈ ಹಿಂದಿನ ಹಂತಗಳ ಮತದಾನದ ವೇಳೆ ವ್ಯಾಪಕ ಹಿಂಸಾಚಾರ ಮತ್ತು ಅಕ್ರಮಗಳು ನಡೆದಿವೆ.

ಇದನ್ನೂ ಓದಿ :ಶಾಲೆಯಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಕಾರಣ ನಿಗೂಢ

ಹೀಗಾಗಿ ಕೇಂದ್ರೀಯ ಪಡೆಗಳನ್ನು ನಿಯೋಜಿಸಿ ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಕಲ್ಪಿಸಬೇಕು ಎಂದೂ ಅರ್ಜಿದಾರರು ಕೋರಿದ್ದರು. ಆದರೆ, ಈ ಅರ್ಜಿಯನ್ನು ನಾವು ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next