Advertisement

ಬೆಳ್ಳಂದೂರು ಕೆರೆ ಮಲಿನ ಪ್ರಕರಣ ತಡೆಯಾಜ್ಞೆ ತೆರವುಗೊಳಿಸಿದ ಸುಪ್ರೀಂ

11:43 AM Aug 09, 2017 | |

ಬೆಂಗಳೂರು: ಬೆಳ್ಳಂದೂರು ಕೆರೆ ಕಲುಷಿತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಖಾಸಗಿ ಕಂಪೆನಿಗಳನ್ನು ಮುಚ್ಚಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ನೀಡಿದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತೆರವುಗೊಳಿಸಿದೆ.

Advertisement

ಬೆಳ್ಳಂದೂರು ಕೆರೆ ಪ್ರದೇಶದಲ್ಲಿ ಕೈಗಾರಿಕಾ ಚಟುವಟಿಕೆ ನಡೆಸುವ ಮೂಲಕ ಕೆರೆ ಮಲೀನಕ್ಕೆ ಕಾರಣವಾಗಿರುವ ಹಲವು ಖಾಸಗಿ ಕಂಪೆನಿಗಳನ್ನು ಮುಚ್ಚಿಸುವಂತೆ ರಾಷ್ಟ್ರೀಯ ಹಸಿರು ನ್ಯಾನ್ಯಾಯಾಧಿಕರಣ (ಎನ್‌ಜಿಟಿ) ಈ ಹಿಂದೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಶಶಿ ಡಿಸ್ಟಲರೀಸ್‌ ರಾಜ್ಯ ಹೈಕೋರ್ಟ್‌ ಮೆಟ್ಟಿಲೇರಿತ್ತು.

ತಮ್ಮ ಸಂಸ್ಥೆಯನ್ನು ಮುಚ್ಚುವಂತೆ ನಿರ್ದೇಶಿಸುವ ಅಧಿಕಾರ ಎನ್‌ಜಿಟಿ ವ್ಯಾಪ್ತಿಗೆ ಬರುವುದಿಲ್ಲ. ಚೆನ್ನೈನ ಹಸಿರು ನ್ಯಾಯಪೀಠದಲ್ಲಿ ಈ ಸಂಬಂಧ ಅರ್ಜಿ ವಿಚಾರಣೆ ಹಂತದಲ್ಲಿ ಇರುವುದರಿಂದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಧ್ಯ ಪ್ರವೇಶಿಸಿ ನೀಡಿದ ತೀರ್ಪು ಪ್ರಶ್ನಾರ್ಹ ಎಂದು ವಾದಿಸಿತ್ತು. ಈ ವಾದ ಮಾನ್ಯ ಮಾಡಿದ್ದ ಹೈಕೋರ್ಟ್‌, ಎನ್‌ಜಿಟಿ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.

ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ, ಬೆಳ್ಳಂದೂರು ಕೆರೆ ಮಲೀನಗೊಳಿಸುವ ಕೈಗಾರಿಕೆಗಳನ್ನು ಸ್ಥಗಿತಗೊಳಿಸಲು ಕಾನೂನು ಹೋರಾಟ ನಡೆಸುತ್ತಿರುವ ನಮ್ಮ ಬೆಂಗಳೂರು ಫೌಂಡೇಶನ್‌, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next