Advertisement

ಪದ್ಮಾವತಿಗೆ ರಿಲೀಫ್ : ಬಿಡುಗಡೆಗೆ ತಡೆ ಕೋರಿದ್ದ ಅರ್ಜಿ ವಜಾ 

02:25 PM Nov 10, 2017 | Team Udayavani |

ಹೊಸದಿಲ್ಲಿ : ನಿರ್ದೇಶಕ ಸಂಜಯ್‌ಲೀಲಾ ಬನ್ಸಾಲಿ ಅವರಿಗೆ ದೊಡ್ಡ ರಿಲೀಫ್ ದೊರಕಿದ್ದು ಬಹುಚರ್ಚಿತಪದ್ಮಾವತಿ ಚಿತ್ರದ ಬಿಡುಗಡೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾ ಗೊಳಿಸಿದೆ. 

Advertisement

ಚಿತ್ರ ರಜಪೂತರ ಭಾವನೆಗಳಿಗೆ ಧಕ್ಕೆ ತರುತ್ತದೆ,ಅದರ ಬಿಡುಗಡೆಗೆ ತಡೆ ಹೇರಬೇಕೆಂದು ಗುಂಪೊಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ‘ಚಿತ್ರಕ್ಕೆ ಇನ್ನೂ ಸೆನ್ಸಾರ್‌ ಸರ್ಟಿಫಿಕೆಟ್‌ ದೊರಕಿಲ್ಲ. ಮಂಡಳಿ  ಯೊಂದು ಸ್ವತಂತ್ರ ಸಂಸ್ಥೆಯಾಗಿದ್ದು,  ಅದರ ಅಧಿಕಾರ ವ್ಯಾಪ್ತಿಯಲ್ಲಿ ಸುಪ್ರೀಂ ಮಧ್ಯಪ್ರವೇಶಿಸುವಂತಿಲ್ಲ’ ಎಂದಿದೆ.

ಡಿಸೆಂಬರ್‌ 1 ರಂದು ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು, ಹಲವು ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿವೆ. 

ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ದೀಪಿಕಾ ಪಡುಕೋಣೆ, ರಣ್‌ವೀರ್‌ ಸಿಂಗ್‌, ಶಾಹಿದ್‌ ಕಪೂರ್‌ ಅವರಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next