Advertisement

ಮಾ.15ರೊಳಗೆ ಬಾಕಿ ಪಿಂಚಣಿ ಪಾವತಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

09:48 PM Jan 09, 2023 | Shreeram Nayak |

ನವದೆಹಲಿ: ಒಂದು ಶ್ರೇಣಿ, ಒಂದು ಪಿಂಚಣಿ(ಒಆರ್‌ಒಪಿ) ಅಡಿಯಲ್ಲಿ ನಿವೃತ್ತ ಸೈನಿಕರಿಗೆ ಬಾಕಿ ಇರುವ ಪಿಂಚಣಿಯನ್ನು ಮಾ.15ರೊಳಗಾಗಿ ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಜತೆಗೆ, ಇದರಲ್ಲಿ ಇನ್ನು ವಿಳಂಬ ಮಾಡುವಂತಿಲ್ಲ ಎಂದು ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಕೇಂದ್ರಕ್ಕೆ ತಾಕೀತು ಮಾಡಿತು.

Advertisement

ಒಆರ್‌ಒಪಿ ಅಡಿಯಲ್ಲಿ ಬಾಕಿ ಪಿಂಚಣಿ ಪಾವತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಯಾವುದೇ ಕ್ರಮದಿಂದ ನೊಂದಿದ್ದರೆ, ಅರ್ಜಿ ಸಲ್ಲಿಸಲು ಮಾಜಿ ಸೈನಿಕರ ಸಂಘಕ್ಕೆ ಸ್ವಾತಂತ್ರ್ಯವಿದೆ ಎಂದೂ ನ್ಯಾಯಪೀಠ ಹೇಳಿತು.

“ರಕ್ಷಣಾ ಪಡೆಗಳ ಲೆಕ್ಕಪತ್ರ
ಮಹಾನಿಯಂತ್ರಕರು(ಸಿಜಿಡಿಎ) ಪ್ರಕ್ರಿಯೆ ಪೂರ್ಣಗೊಳಿಸಿದೆ. ಮಾ.15ರೊಳಗೆ ಎÇÉಾ 25 ಲಕ್ಷ ಪಿಂಚಣಿದಾರರ ಖಾತೆಗಳಿಗೆ ಪಿಂಚಣಿ ಪಾವತಿಸಲಾಗುವುದು,’ ಎಂದು ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next