Advertisement

BV Srinivas Case: ಪ್ರತಿವಾದಿ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಿದ ಸುಪ್ರೀಂ

05:28 PM Jul 10, 2023 | Team Udayavani |

ನವದೆಹಲಿ: ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದು ಮಾಡಿರುವ ಗುವಾಹಟಿ ಹೈಕೋರ್ಟ್‌ ಆದೇಶದ ವಿರುದ್ಧ ಭಾರತೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿ ಅರ್ಜಿ ಸಲ್ಲಿಕೆಗೆ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಾಲ್ಕು ವಾರಗಳ ಕಾಲವಧಿಯನ್ನು ನೀಡಿದೆ.

Advertisement

ಉಚ್ಚಾಟಿತ ಅಸ್ಸಾಂ ಯುವ ಕಾಂಗ್ರೆಸ್‌ ಅಧ್ಯಕ್ಷೆ ದಾಖಲಿಸಿರುವ ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶ್ರೀನಿವಾಸ್‌ ಸಲ್ಲಿಸಿದ್ದ ಅರ್ಜಿಯನ್ನು ಮೇನಲ್ಲಿ ಗುವಾಹಟಿ ಹೈಕೋರ್ಟ್‌ ತಿರಸ್ಕರಿಸಿತ್ತು.

ಬಳಿಕೆ ಮೇ 17ರಂದು ಸುಪ್ರೀಂ ಕೋರ್ಟ್‌ ಶ್ರೀನಿವಾಸ್‌ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಿ.ಆರ್‌.ಗವಾಯ್‌ ಮತ್ತು ನ್ಯಾ. ಜೆ.ಬಿ.ಪರ್ಡಿವಾಲಾ ಅವರಿದ್ದ ನ್ಯಾಯಪೀಠದ ಎದರು ಪ್ರತಿವಾದಿ ಅರ್ಜಿ ಸಲ್ಲಿಕೆಗೆ ಅಸ್ಸಾಂ ಸರ್ಕಾರದ ಪರ ನ್ಯಾಯವಾದಿಗಳು ಕೊಂಚ ಸಮಯ ಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next