Advertisement

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

12:56 AM Oct 05, 2024 | Team Udayavani |

ಹೊಸದಿಲ್ಲಿ: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮೀಸಲಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ 10 ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾ ಮಾಡಿದೆ.

Advertisement

ಆ. 1ರಂದು ನೀಡಿದ್ದ ತೀರ್ಪಿನಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ 7 ನ್ಯಾಯಮೂರ್ತಿಗಳ ಪೀಠವು ಸ್ಪಷ್ಟವಾಗಿ ಹೇಳಿದೆ. ತೀರ್ಪು ಮರುಪರಿಶೀಲನೆಗೆ ಕೋರಿದ್ದ ಅರ್ಜಿಗಳನ್ನು ಪರಿಶೀಲಿಸಲಾಗಿದೆ.

ತೀರ್ಪಿನಲ್ಲಿ ದೋಷವನ್ನು ಎತ್ತಿ ತೋರಿಸುವಂಥ ಯಾವುದೇ ದಾಖಲೆ ಗಳು ಕಂಡು ಬಂದಿಲ್ಲ. ಆದ್ದರಿಂದ ಮರುಪರಿಶೀಲನೆ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಇದೇ ವೇಳೆ, ಓಪನ್‌ ಕೋರ್ಟ್‌ನಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿದ್ದ ಅರ್ಜಿಯನ್ನೂ ನ್ಯಾಯಾಲಯ ತಳ್ಳಿ ಹಾಕಿದೆ.

ಆ. 1ರ ತೀರ್ಪು ಏನಿತ್ತು?
7 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಆಗಸ್ಟ್‌ 1ರಂದು 6:1ರಂತೆ ತೀರ್ಪು ನೀಡಿ, ಒಳ ಮೀಸಲಾತಿ ಕೈಗೊಳ್ಳಲು ಅನುಮತಿ ನೀಡಿದ್ದವು. ಎಸ್‌ಸಿ, ಎಸ್‌ಟಿಗಳಲ್ಲೇ ಅತಿ ಹಿಂದುಳಿದವರನ್ನು ಗುರುತಿಸಿ ಅವರಿಗೆ ಒಳ ಮೀಸಲಾತಿ ನೀಡುವ ಅಧಿಕಾರ ರಾಜ್ಯಗಳಿಗೆ ಇವೆ ಎಂದು ತೀರ್ಪಿನಲ್ಲಿ ತಿಳಿಸಲಾಗಿತ್ತು. 7 ನ್ಯಾಯಮೂರ್ತಿಗಳು ಪ್ರತ್ಯೇಕ ತೀರ್ಪು ಪ್ರಕಟಿಸಿದ್ದು, ನ್ಯಾ| ಬೇಲಾ ತ್ರಿವೇದಿ ಅವರು ಮಾತ್ರ ಒಳ ಮೀಸಲಾತಿಯನ್ನು ವಿರೋಧಿಸಿದ್ದರು. ಇದೇ ವೇಳೆ ಪೀಠವು 2004ರ ಇ.ವಿ. ಚಿನ್ನಯ್ಯ ಪ್ರಕರಣದಲ್ಲಿ ನೀಡಲಾಗಿದ್ದ ತೀರ್ಪನ್ನು ತಳ್ಳಿ ಹಾಕಿತ್ತು.

ತೀರ್ಪಲ್ಲಿ ಲೋಪವಿಲ್ಲ
ಒಳಮೀಸಲಾತಿ ನೀಡುವ ಅಧಿಕಾರ ರಾಜ್ಯಗಳಿಗೆ ಇವೆ ಎಂದು ಆ. 1ರಂದು ತೀರ್ಪು ನೀಡಿದ್ದ ಸುಪ್ರೀಂ
ತೀರ್ಪು ಮರುಪರಿಶೀಲಿಸಬೇಕೆಂದು ಸುಪ್ರೀಂ ಕೋರ್ಟ್‌ಗೆ 10 ಅರ್ಜಿಗಳ ಸಲ್ಲಿಕೆ
ಆ ತೀರ್ಪಿನಲ್ಲಿ ಯಾವುದೇ ಲೋಪವಿಲ್ಲ. ಅದು ಸರಿಯಾಗಿಯೇ ಇದೆ ಎಂದ ನ್ಯಾಯಪೀಠ

Advertisement
Advertisement

Udayavani is now on Telegram. Click here to join our channel and stay updated with the latest news.

Next