Advertisement

ಒಮರ್‌ ಅಬ್ದುಲ್ಲಾ ವಿರುದ್ಧದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

10:11 AM Feb 14, 2020 | Team Udayavani |

ಹೊಸದಿಲ್ಲಿ: ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಒಮರ್‌ ಅಬ್ದುಲ್ಲಾ ವಿರುದ್ಧದ ಪ್ರಕರಣದ ವಿಚಾರಣೆಯಿಂದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಎಂ.ಎಂ.ಶಾಂತನಗೌಡರ್‌ ಹಿಂದೆ ಸರಿದಿದ್ದಾರೆ. ಒಮರ್‌ ವಿರುದ್ಧ ಸಾರ್ವಜನಿಕ ಭದ್ರತಾ ಕಾಯ್ದೆ (ಪಿಎಸ್‌ಎ ಆ್ಯಕ್ಟ್) ವ್ಯಾಪ್ತಿಯಲ್ಲಿ ಕೇಸು ದಾಖಲಿಸಿದ್ದನ್ನು ಪ್ರಶ್ನಿಸಿ ಅವರ ಸಹೋದರಿ ಸಾರಾ ಪೈಲಟ್‌ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾ| ಎನ್‌.ವಿ. ರಮಣ ನೇತೃತ್ವದ ನ್ಯಾಯಪೀಠದಲ್ಲಿ ಬುಧವಾರ ನಡೆಯಬೇಕಾಗಿತ್ತು.

Advertisement

ವಿಚಾರಣೆ ಶುರುವಾಗುತ್ತಿದ್ದಂತೆಯೇ ‘ಈ ಪ್ರಕರಣದ ವಿಚಾರಣೆಯಲ್ಲಿ ಭಾಗವಹಿಸುವುದಿಲ್ಲ’ ಎಂದು ನ್ಯಾ| ಶಾಂತನಗೌಡರ್‌ ಹೇಳಿದರು. ಸಾರಾ ಪರ ಪಕೀಲ ಕಪಿಲ್‌ ಸಿಬಲ್‌ ಫೆ. 14ರಂದು ವಿಚಾರಣೆ ನಡೆಸುವಂತೆ ಮಾಡಿದ ಮನವಿಯನ್ನು ಕೋರ್ಟ್‌ ಪುರಸ್ಕರಿಸಿತು.

Advertisement

Udayavani is now on Telegram. Click here to join our channel and stay updated with the latest news.

Next