Advertisement

ರಫೇಲ್‌: ನಿರ್ಧಾರ ಇಂದು

06:25 AM Dec 14, 2018 | Karthik A |

ಹೊಸದಿಲ್ಲಿ: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪ ಪ್ರಕರಣಗಳ ತನಿಖೆ ನಡೆಸಬೇಕೇ, ಬೇಡವೇ ಎಂಬ ಬಗ್ಗೆ ಸುಪ್ರೀಂಕೋರ್ಟ್‌ ಶುಕ್ರವಾರ ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಈ ಸಂಬಂಧ ವಿಚಾರಣೆ ನಡೆಸಿ ನ.14 ರಂದು ತೀರ್ಪು ಕಾಯ್ದಿರಿಸಿದ್ದರು. ವಕೀಲ ಎಂ.ಎಲ್‌. ಶರ್ಮಾ ಈ ಸಂಬಂಧ ಮೊದಲು ಪ್ರಕರಣ ದಾಖಲಿಸಿದ್ದು, ನಂತರದಲ್ಲಿ ಇತರ ಹಲವು ವಕೀಲರು ಹಾಗೂ ಸಾಮಾಜಿಕ ಹೋರಾಟಗಾರರೂ ದೂರು ದಾಖಲಿಸಿದ್ದರು. ಅಷ್ಟೇ ಅಲ್ಲ, ಮಾಜಿ ಕೇಂದ್ರ ಸಚಿವ ಅರುಣ್‌ ಶೌರಿ ಹಾಗೂ ಯಶವಂತ ಸಿನ್ಹಾ, ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಕೂಡ ಕೋರ್ಟ್‌ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ದೂರು ಸಲ್ಲಿಸಿದ್ದರು. ವಾದ ಹಾಗೂ ಪ್ರತಿವಾದವನ್ನು ಕೋರ್ಟ್‌ ಆಲಿಸಿದ್ದು, ವಾಯುಪಡೆಯ ಹಿರಿಯ ಅಧಿಕಾರಿಗಳ ಅಭಿಪ್ರಾಯವನ್ನೂ ಪಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next