Advertisement

Supreme Court;ಇಂದು ನಡೆಯದ ಮಹದಾಯಿ ನದಿ ನೀರು ಹಂಚಿಕೆ ವಿಚಾರಣೆ

06:49 PM Jan 11, 2024 | Team Udayavani |

ಪಣಜಿ: ಮಹದಾಯಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಗೋವಾ ರಾಜ್ಯವು ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಸಿರುವ ವಿಶೇಷ ಅರ್ಜಿಯ ವಿಚಾರಣೆ ಜನವರಿ 11 ರಂದು (ಗುರುವಾರ ) ನಡೆದಿಲ್ಲ, ಮುಂದಿನವಾರ ಈ ಪ್ರಕರಣದ ವಿಚಾರಣೆ ನಡೆಯುವ ಸಾಧ್ಯತೆಯಿದೆ ಎಂದು ಮಹದಾಯಿ ಪ್ರಕರಣದ ಗೋವಾ ಪರ ಹಿರೀಯ ವಕೀಲ ಅಡ್ವೊಕೇಟ್ ಜನರಲ್ ದೇವಿದಾಸ್ ಪಾಂಗಮ್ ಮಾಹಿತಿ ನೀಡಿದ್ದಾರೆ.

Advertisement

ಕರ್ನಾಟಕದಲ್ಲಿ ಕಳಸಾ-ಭಂಡೂರ ವಿಸ್ತೃತ ಯೋಜನಾ ವರದಿ (ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬಳಿಕ ಮಹದಾಯಿ ವಿಚಾರ ಮತ್ತೆ ಚರ್ಚೆಗೆ ಬಂದಿತ್ತು. ಗೋವಾದಲ್ಲಿ ಪ್ರತಿಪಕ್ಷಗಳು ಮತ್ತು ಪರಿಸರವಾದಿಗಳು ಈ ನಿಟ್ಟಿನಲ್ಲಿ ಗೋವಾ ಸರ್ಕಾರವು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ಗೋವಾ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು.

ಜ. 10 ರಂದು ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ಆರಂಭಗೊಂಡಿತ್ತು. ಮಹದಾಯಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಗೋವಾ ಈ ಎರಡೂ ರಾಜ್ಯಗಳ ಗಮನ ನ್ಯಾಯಾಲಯದತ್ತ ನೆಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next