Advertisement

ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ‌ಕೋರ್ಟ್‌ ನೋಟಿಸ್

07:29 AM Jun 05, 2020 | Lakshmi GovindaRaj |

ಹಾಸನ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಆಸ್ತಿಯ ಬಗ್ಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಸಂಬಂಧ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್‌  ನೋಟಿಸ್‌ ಜಾರಿ ಮಾಡಿದೆ.

Advertisement

ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಜ್ವಲ್‌ ರೇವಣ್ಣ ಅವರು ಗೆಲವು ಸಾಧಿಸಿದ್ದರು. ಆವರು ಚುನಾವಣೆಯ ನಾಮಪತ್ರ ಸಲ್ಲಿಸುವಾಗ ಆಸ್ತಿಯ ಬಗ್ಗೆ  ಸುಳ್ಳು ಮಾಹಿತಿ ನೀಡಿದ್ದಾರೆ.  ದ್ದರಿಂದ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು ಎಂದು ಅವರ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿ ಅಭ್ಯರ್ಥಿ ಎ.ಮಂಜು ಹೈ ಕೋರ್ಟ್‌ಗೆ ಹೋಗಿದ್ದರು. ಆದರೆ ತಾಂತ್ರಿಕ ಕಾರಣ ನೀಡಿ ಎ.ಮಂಜು  ಅವರ ದೂರನ್ನು ಹೈ ಕೋರ್ಟ್‌ ವಜಾ ಮಾಡಿತ್ತು. ಆದರೆ ಅವರು ಸುಪ್ರೀಂ ಕೋರ್ಟಿಗೂ ಮೇಲ್ಮನವಿ ಸಲ್ಲಿಸಿದ್ದರು.

ಈ ನಡುವೆ ಹಾಸನದ ವಕೀಲ ದೇವರಾಜೇಗೌಡ ಅವರು ಪ್ರಜ್ವಲ್‌ ರೇವಣ್ಣ ಅವರ ವಿರುದ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಪುರಸ್ಕರಿಸಿ ಈ ಸಂಬಂಧ ಪ್ರತಿಕ್ರಿಯಿಸಲು ಪ್ರಜ್ವಲ್‌ ರೇವಣ್ಣ ಅವರಿಗೆ ಬುಧವಾರ ನೋಟೀಸ್‌ ಜಾರಿ ಮಾಡಿದೆ. ಎ.  ಮಂಜು ಅವರು ಸಲ್ಲಿಸಿದ್ದ ಅರ್ಜಿಯನ್ನೂ ಸೇರ್ಪಡೆ ಮಾಡಿಕೊಳ್ಳು ವಂತೆ ದೇವರಾಜೇಗೌಡ ಅವರು  ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಪುರಸ್ಕರಿಸಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next