Advertisement

ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ

07:50 AM Oct 28, 2017 | |

ಜೈಪುರ: ಸರ್ಕಾರಿ ಅಧಿಕಾರಿಗಳ ವಿರುದ್ಧದ ತನಿಖೆಗೆ ಸಂಬಂಧಿಸಿದಂತೆ ಇತ್ತೀಚೆಗೆ ವಿವಾದಾತ್ಮಕ ನಿರ್ಧಾರ ಕೈಗೊಳ್ಳಲೆತ್ನಿಸಿದ್ದ ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. 

Advertisement

ಕೇಂದ್ರ ಸರ್ಕಾರಕ್ಕೂ ಈ ಬಗ್ಗೆ ನೋಟಿಸ್‌ ಕಳುಹಿಸಿರುವ ಸುಪ್ರೀಂ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಯನ್ನು ನ. 27ಕ್ಕೆ ಮುಂದೂಡಿದೆ.

ಸರ್ಕಾರಿ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರು ತಮ್ಮ ಸೇವಾವಧಿಯಲ್ಲಿ ಎಸಗಲಾದ ತಪ್ಪುಗಳ ವಿರುದ್ಧ ನ್ಯಾಯಾಲಯಕ್ಕೆ ದೂರು ನೀಡಲು ಸರ್ಕಾರದ ಅನುಮತಿ ಪಡೆಯಬೇಕೆಂಬ ನಿರ್ಣಯವನ್ನು ರಾಜಸ್ಥಾನ ಸರ್ಕಾರ ಕೈಗೊಂಡಿತ್ತು. ಅಲ್ಲದೆ, ನ್ಯಾಯಾಲಯವು ತನಿಖೆಗೆ ಆದೇಶ ನೀಡುವುದಕ್ಕೂ ಮೊದಲು ಮಾಧ್ಯಮಗಳಲ್ಲಿ ಆರೋಪಿತ ಸರ್ಕಾರಿ ಅಧಿಕಾರಿಗಳ ವಿರುದ್ಧ ಯಾವುದೇ ಸುದ್ದಿ ಬಿತ್ತರವಾಗದಂತೆ ತಡೆಯೊಡ್ಡುವ ಪ್ರಯತ್ನ ಅದಾಗಿತ್ತು.

ಇದರ ವಿರುದ್ಧ ರಾಜಸ್ಥಾನ ಕಾಂಗ್ರೆಸ್‌ನ ಮುಖ್ಯಸ್ಥ ಸಚಿನ್‌ ಪೈಲಟ್‌, ಆಮ್‌ ಆದ್ಮಿ ನಾಯಕಿ ಪೂನಮ್‌ ಚಾಂದ್‌ ಭಂಡಾರಿ ಹಾಗೂ ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟೀಸ್‌ ಎಂಬ ಸರ್ಕಾರೇತರ ಸಂಸ್ಥೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿವೆ. ಪರಿಣಾಮ ಸಿಎಂ ವಸುಂಧರ ರಾಜೇ ಅವರ ಮೇಲೆ ಇನ್ನಷ್ಟು ಒತ್ತಡ ಹೆಚ್ಚಿದೆ.

Advertisement

Udayavani is now on Telegram. Click here to join our channel and stay updated with the latest news.

Next