Advertisement

ಜಾತಿ ಆಧಾರಿತ ಅಪರಾಧಗಳು ಇನ್ನೂ ತೊಲಗಿಲ್ಲ : ಸರ್ವೋಚ್ಚ ನ್ಯಾಯಾಲಯ ಅಸಮಾಧಾನ

08:35 PM Nov 28, 2021 | Team Udayavani |

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇಲ್ಲಿನ ಸಮಾಜದಲ್ಲಿ ಆಳವಾಗಿ ಬೇರೂರಿರುವ ಜಾತಿವಾದದ ಪಿಡುಗನ್ನು ತೊಲಗಿಸಲು ಸಾಧ್ಯವಾಗಿಲ್ಲ ಎಂದು ಸುಪ್ರೀಂ ಕೋರ್ಟ್‌ ವಿಷಾದಿಸಿದೆ. ಇದೇ ವೇಳೆ, ಜಾತಿ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ಸಾರಾಸಗಟಾಗಿ ನಿರಾಕರಿಸುವಂಥ ಮನೋಭಾವ ನಮ್ಮ ಸಮಾಜದಲ್ಲಿ ಇನ್ನಾದರೂ ಬೆಳೆಯಲಿ ಎಂದೂ ಆಶಿಸಿದೆ.

Advertisement

1991ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದಿದ್ದ ಮರ್ಯಾದೆಗೇಡು ಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯ ಅಂತಿಮ ತೀರ್ಪು ನೀಡಿದ ನ್ಯಾ. ಎಲ್‌. ನಾಗೇಶ್ವರ ರಾವ್‌ ಅವರುಳ್ಳ ನ್ಯಾಯಪೀಠ, “ಇಂಥ ಜಾತಿ ಆಧಾರಿತ ಅಪರಾಧಗಳನ್ನು ಹತ್ತಿಕ್ಕುವಲ್ಲಿ ಸರ್ಕಾರಗಳು ಕಠಿಣ ಕಾನೂನುಗಳನ್ನು ರೂಪಿಸಬೇಕು ಎಂದು ಈಗಾಗಲೇ ಸಾಕಷ್ಟು ಬಾರಿ ಸರ್ಕಾರಗಳಿಗೆ ಸೂಚನೆ ನೀಡಿದ್ದೇವೆ. ಆದರೆ, ಈ ಕುರಿತ ಕಾನೂನುಗಳು ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ. ಇನ್ನಾದರೂ ಕಟ್ಟುನಿಟ್ಟಿನ ಕಾನೂನುಗಳು ಜಾರಿಯಾಗಲಿ” ಎಂದು ಹೇಳಿತು.

ಇದನ್ನೂ ಓದಿ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next