Advertisement

ಒಮರ್‌ ಅಬ್ದುಲ್ಲಾ ವಿರುದ್ಧ ಮೊಕದ್ದಮೆ : ಕೇಂದ್ರಕ್ಕೆ ನೋಟಿಸ್‌ ಜಾರಿ

09:54 AM Feb 16, 2020 | Team Udayavani |

ಹೊಸದಿಲ್ಲಿ: ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಒಮರ್‌ ಅಬ್ದುಲ್ಲಾ ವಿರುದ್ಧ ಸಾರ್ವಜನಿಕ ಭದ್ರತಾ ಕಾಯ್ದೆ (ಪಿಎಸ್‌ಎ ಆ್ಯಕ್ಟ್) ಅನ್ವಯ ಮೊಕದ್ದಮೆ ಹೂಡಿದ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್‌ ಶುಕ್ರವಾರ ನೋಟಿಸ್‌ ನೀಡಿದೆ.

Advertisement

ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್‌ ಸಲ್ಲಿಕೆ ಮಾಡಿದ ನ್ಯಾ| ಅರುಣ್‌ ಮಿಶ್ರಾ ಮತ್ತು ನ್ಯಾ| ಇಂದಿರಾ ಬ್ಯಾನರ್ಜಿ ಅವರನ್ನು ಒಳಗೊಂಡ ಪೀಠ, ಮಾ.2ರ ನಂತರ ಪ್ರಕರಣದ ವಿಚಾರಣೆ ನಡೆಸುವುದಾಗಿ ಹೇಳಿತು.

ಸೋಮವಾರವೇ ಸಾರಾ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಪೀಠದಲ್ಲಿದ್ದ ನ್ಯಾ| ಎಂ.ಎಂ.ಶಾಂತನಗೌಡರ್‌ ವಿಚಾರಣೆಯಿಂದ ಹಿಂದೆ ಸರಿದಿದ್ದ ಹಿನ್ನೆಲೆಯಲ್ಲಿ ಹೊಸ ನ್ಯಾಯಪೀಠ ರಚಿಸಿ ಅರ್ಜಿ ಕೈಗೆತ್ತಿಕೊಳ್ಳಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next