Advertisement

ಪ್ರಾಧಿಕಾರಗಳಲ್ಲಿ ಕೇಂದ್ರದ ಹಸ್ತಕ್ಷೇಪಕ್ಕೆ ಸುಪ್ರೀಂ ಆಕ್ಷೇಪ; ಹೊಸ ನಿಯಮ ರೂಪಿಸಲು ನಿರ್ದೇಶನ

11:14 AM Nov 14, 2019 | Team Udayavani |

ನವದೆಹಲಿ: ಹಸಿರು ಪ್ರಾಧಿಕಾರ ಸೇರಿದಂತೆ ದೇಶದಲ್ಲಿರುವ ವಿವಿಧ ಪ್ರಾಧಿಕಾರಿಗಳಿಗೆ ಸದಸ್ಯರ ನೇಮಕ ವಿಚಾರದಲ್ಲಿ ಕೇಂದ್ರ ಸರಕಾರದ ನೇರ ಪಾತ್ರಕ್ಕೆ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಮತ್ತು ಈ ಉದ್ದೇಶಕ್ಕಾಗಿ ಹಣಕಾಸು ಕಾಯ್ದೆ 2017ರಲ್ಲಿ ರೂಪಿಸಲಾಗಿರುವ ನಿಯಮಗಳನ್ನು ಸಂವಿಧಾನ ಬಾಹಿರ ಎಂದು ಪಂಚ ಸದಸ್ಯ ಪೀಠ ನರೇಂದ್ರ ಮೋದಿ ಸರಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

Advertisement

ಪ್ರಾಧಿಕಾರಕ್ಕೆ ಸದಸ್ಯರನ್ನು ನೇಮಿಸುವ ವಿಚಾರದಲ್ಲಿ ಈ ಸಂಬಂಧ ರೂಪುಗೊಂಡಿರುವ ಕಾಯಿದೆಗಳಡಿಯಲ್ಲೇ ಈ ಪ್ರಕ್ರಿಯೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸ್ಪಷ್ಟ ನಿರ್ದೇಶನವನ್ನು ನೀಡಿದೆ.

ಇನ್ನು, ಹಣಕಾಸು ಕಾಯ್ದೆ – 2017ನ್ನು, ಧನ ವಿಧೇಯಕ ರೂಪದಲ್ಲಿ ಮಂಡಿಸಿ ನರೇಂದ್ರ ಮೋದಿ ಸರಕಾರ ಸಂಸತ್ತಿನ ಅಂಗೀಕಾರ ಪಡೆದುಕೊಂಡಿರುವ ವಿಚಾರವನ್ನು ವಿಸ್ತೃತ ಪೀಠವೇ ನಿರ್ಧರಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪಂಚ ಸದಸ್ಯ ಪೀಠ ಅಭಿಪ್ರಾಯಪಟ್ಟಿತು.

ದೇಶದಲ್ಲಿರುವ ವಿವಿಧ ಪ್ರಾಧಿಕಾರಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ರೂಪಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಂಸತ್ತಿನ ಅನುಮೋದನೆಯನ್ನು ಪಡೆದುಕೊಂಡಿರುವ ಧನ ವಿಧೇಯಕ – 2017ರ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟಿನ ಐವರು ಸದಸ್ಯರ ಪೀಠ ಈ ಮಹತ್ವದ ತೀರ್ಪನ್ನು ನೀಡಿದೆ.

‘ವೈವಿಧ್ಯಮಯ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವ ವಿವಿಧ ಪ್ರಾಧಿಕಾರಗಳ ಮೇಲೆ ಕೇಂದ್ರ ಸರಕಾರ ನಿಯಂತ್ರಣ ಸಾಧಿಸಲು ಪ್ರಯತ್ನಿಸುವುದು ಅವುಗಳ ಕಾರ್ಯನಿರ್ವಹಣೆಯ ಮೇಲೆ ನೇರ ಹಸ್ತಕ್ಷೇಪ ನಡೆಸಿದಂತಾಗುತ್ತದೆ’ ಎಂದು ಈ ಪ್ರಕರಣದ ಮೇಲಿನ ತನ್ನ ತೀರ್ಪಿನಲ್ಲಿ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಅಭಿಪ್ರಾಯಪಟ್ಟಿದ್ದಾರೆ.

Advertisement

ಈ ಪ್ರಾಧಿಕಾರಗಳಿಗೆ ನೇಮಕಾತಿ ನಡೆಸಲು ರಾಷ್ಟ್ರೀಯ ಪ್ರಾಧಿಕಾರ ಆಯೋಗ ಮತ್ತು ಅಖಿಲ ಭಾರತ ಪ್ರಾಧಿಕಾರ ಸೇವೆಗಳನ್ನು ಸ್ಥಾಪಿಸುವಂತೆಯೂ ಸಹ ನ್ಯಾಯಪೀಠ ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next