Advertisement

ತ್ರಿವಳಿ ತಲಾಖ್ ವಿಚಾರಣೆ ಹೊಣೆ ಸಾಂವಿಧಾನಿಕ ಪೀಠಕ್ಕೆ: ಸುಪ್ರೀಂ

03:30 PM Mar 30, 2017 | Sharanya Alva |

ನವದೆಹಲಿ: ತ್ರಿವಳಿ ತಲಾಖ್ ಸಂಪ್ರದಾಯದ ಕುರಿತು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್ ಗುರುವಾರ ನಿರ್ಧರಿಸಿದ್ದು, ಮೇ 11ರಿಂದ ವಿಚಾರಣೆ ಆರಂಭವಾಗಲಿದೆ.

Advertisement

ತ್ರಿವಳಿ ತಲಾಖ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಇದೊಂದು ಸೂಕ್ಷ್ಮ ವಿಷಯ ಹಾಗಾಗಿ ಈ ಬಗ್ಗೆ ಸಾಂವಿಧಾನಿಕ ಪೀಠವೇ ಅಂತಿಮ ನಿರ್ಧಾರ ಕೈಗೊಳ್ಳುವುದು ಅನಿವಾರ್ಯ ಎಂಬ ಸೂಚನೆ ನೀಡಿತ್ತು.

ಅರ್ಜಿಗಳಲ್ಲಿ ಪ್ರಸ್ತಾಪವಾಗಿರುವ ವಿಚಾರ ಅತ್ಯಂತ ಮಹತ್ವದ್ದು.ಅವುಗಳನ್ನು ನಿರ್ಲಕ್ಷ್ಯ ವಹಿಸಲಾಗದು. ತ್ರಿವಳಿ ತಲಾಖ್‌, ನಿಕಾಹ್‌ ಹಲಾಲ್‌, ಬಹುಪತ್ನಿತ್ವಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗಾಗಿ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವನ್ನು ಸುಪ್ರೀಂ ಕೋರ್ಟ್‌ ರಚಿಸುವುದಾಗಿ ಹೇಳಿತ್ತು. ಸಂವಿಧಾನಾತ್ಮಕ ವಿಚಾರಗಳೂ ಒಳಗೊಂಡಿರುವುದರಿಂದ ಇದನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next