Advertisement

ಆಧಾರ್ ಲಿಂಕ್; ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ

04:18 PM Nov 03, 2017 | Team Udayavani |

ನವದೆಹಲಿ: ಮೊಬೈಲ್ ಸಂಖ್ಯೆಗಳನ್ನು ಹಾಗೂ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಿಸುವ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಈ ವಿಷಯವನ್ನು ಸಾಂವಿಧಾನಿಕ ಪೀಠ ನಿರ್ಧರಿಸಲಿದೆ ಎಂದು ತಿಳಿಸಿದೆ.

Advertisement

ಕೆಲವು ಬ್ಯಾಂಕ್‌ಗಳು ಹಾಗೂ ಮೊಬೈಲ್ ಕಂಪನಿಗಳು ಆಧಾರ್ ಲಿಂಕ್ ಮಾಡದೇ ಹೋದರೆ ಖಾತೆ ಸ್ಥಗಿತಗೊಳ್ಳುವುದು ಹಾಗೂ ಮೊಬೈಲ್ ಸಂಪರ್ಕವನ್ನು ಕಡಿತಗೊಳಿಸಲಾಗುವುದೆಂದು ಬೆದರಿಕಾ ಸಂದೇಶ ಕಳುಹಿಸುತ್ತಿದ್ದು, ಇದರ ವಿರುದ್ಧವೂ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತು. ಆದರೆ, ಕೇಂದ್ರ ಸರಕಾರ ಇಂಥ ಸಂದೇಶವನ್ನು ಕಳುಹಿಸುತ್ತಿಲ್ಲವೆಂದು ಸ್ಪಷ್ಟನೆ ನೀಡಿದಾಗ, ನ್ಯಾಯಮೂರ್ತಿ ಎ.ಕೆ.ಸಿಕ್ರಿ ನನಗೂ ಅಂತಹ ಸಂದೇಶಗಳು ಬಂದಿದೆ ಎಂದರು.

ಈ ವಿಷಯದಲ್ಲಿ ಜನರನ್ನು ಭಯಗೊಳಿಸುವುದನ್ನು ಸಂಸ್ಥೆಗಳು ತಪ್ಪಿಸಬೇಕಾಗಿದೆ ಎಂದು ಸುಪ್ರೀಂ ಪೀಠ ಹೇಳಿದೆ. ಮೊಬೈಲ್ ಹಾಗೂ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್, ಇದನ್ನು ಸಾಂವಿಧಾನಿಕ ಪೀಠ ನಿರ್ಧರಿಸಲಿದೆ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next